ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಕೋಟ್ಯಂತರ ರೂ. ಮೋಸ ಮಾಡುತ್ತಿದ್ದವನ ಬಂಧನ

ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು‌ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.

ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.

ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು‌ ಮಾಹಿತಿ‌ ನೀಡಿದರು.

ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು

ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮನೆ ದರೋಡೆ ಪ್ರಕರಣ

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.

ಸ್ಪಾ ಮೇಲಿನ ದಾಳಿ

ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

5 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

13 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

17 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

20 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

22 hours ago