ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.
ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.
ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು
ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.
ಸ್ಪಾ ಮೇಲಿನ ದಾಳಿ
ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…