ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಕೋಟ್ಯಂತರ ರೂ. ಮೋಸ ಮಾಡುತ್ತಿದ್ದವನ ಬಂಧನ

ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು‌ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.

ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.

ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು‌ ಮಾಹಿತಿ‌ ನೀಡಿದರು.

ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು

ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮನೆ ದರೋಡೆ ಪ್ರಕರಣ

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.

ಸ್ಪಾ ಮೇಲಿನ ದಾಳಿ

ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

8 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

9 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

14 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago