ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.
ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.
ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು
ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.
ಸ್ಪಾ ಮೇಲಿನ ದಾಳಿ
ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…