ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಕೋಟ್ಯಂತರ ರೂ. ಮೋಸ ಮಾಡುತ್ತಿದ್ದವನ ಬಂಧನ

ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು‌ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.

ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.

ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು‌ ಮಾಹಿತಿ‌ ನೀಡಿದರು.

ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು

ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮನೆ ದರೋಡೆ ಪ್ರಕರಣ

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.

ಸ್ಪಾ ಮೇಲಿನ ದಾಳಿ

ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

5 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago