ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6, 7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ…

ಮೇ.5ರ ಮಂಗಳವಾರ ಸಂಜೆ 4ಗಂಟೆಗೆ ಮುತ್ತೈದೆಯರಿಂದ ಮತ್ತು ಹೆಣ್ಣು ಮಕ್ಕಳಿಂದ ಗಂಗೆ ಪೂಜೆ ಮತ್ತು ಗಣಪತಿ, ಮಹಾಮಂಗಳಾರತಿ ಏರ್ಪಡಿಸಲಾಗಿದೆ…

ಮೇ.6ರ ಬುಧವಾರದಂದು ಬೆಳಗ್ಗೆ 6 ಗಂಟೆಗೆ ಯಾಗಶಾಲೆ ಪ್ರವೇಶ, ಗೋಪೂಜೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ, ದೇವನಾಂದಿ ಪ್ರಾರ್ಥನೆ, ಕಳಶ ಸ್ಥಾಪನೆ, ಗಣಪತಿ ಹೋಮ, ನವಗ್ರಹ ಹೋಮ, ಮಹಾಮೃತ್ಯುಂಜಯ ಸ್ವಾಮಿ ಹೋಮ, ಬ್ರಹ್ಮ ವಿಷ್ಣು ಮಹೇಶ್ವರ ಸ್ವಾಮಿ ಹೋಮ, ಗ್ರಾಮದೇವತೆ ಹೋಮ, ಮತ್ತು ಪೂರ್ಣಾಹುತಿ ಇರುತ್ತದೆ.

ಬೆಳಿಗ್ಗೆ 10 ಗಂಟೆಗೆ ಅಶ್ವತ್ಥನಾರಾಯಣಸ್ವಾಮಿ ವಿವಾಹ, ಮಧ್ಯಾಹ್ನ 12ಗಂಟೆಗೆ ಮಹಾಮಂಗಳಾರತಿ, ಮಧ್ಯಾಹ್ನ 12-30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರಲಿದೆ.

ಸಂಜೆ : 5-00 ಗಂಟೆಗೆ ಮಹಾ ಸುದರ್ಶನ ಸ್ವಾಮಿ ಆರಾಧನೆ, ಮತ್ತು ಸುದರ್ಶನ ಹೋಮ, ಸುಬ್ರಹ್ಮಣ್ಯಸ್ವಾಮಿ ಆರಾಧನೆ ಮತ್ತು ನಾಗದೇವರ ವಿಗ್ರಹಗಳಿಗೆ ಅಧಿವಾಸಗಳು, ಧಾನ್ಯಾಧಿವಾಸ, ಶಯ್ಯಾಧಿವಾಸ, ಅಷ್ಠಾವಧಾನ ಸೇವೆ ಮತ್ತು ವಾಸ್ತು ಹೋಮ, ರಾಕ್ಷೆಘ್ನ ಹೋಮ ಮತ್ತು ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿರುತ್ತದೆ…

ಮೇ.7ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ದೇವರ ಪ್ರಾಣ ಪ್ರತಿಷ್ಠಾಪನೆ, ನೇತ್ರೋನ್ಮಿಲನ, ದೇವರ ದರ್ಶನ, ಸುಬ್ರಹ್ಮಣೇಶ್ವರ ಸ್ವಾಮಿ ಹೋಮ, ಸರ್ಪಶಾಂತಿ ಹೋಮ, ದೇವರ ಕಳಾಹೋಮ, ಅಷ್ಟ ದಿಕ್ಷಾಲಕರ ಬಲಿ ಸೇವೆ, ದೇವರಿಗೆ ಫಲಪಂಚಾಮೃತ ಅಭಿಷೇಕ, ದೇವರ ಅಲಂಕಾರ 11-00 ಗಂಟೆಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಇರಲಿದೆ..

ಮೇ.7ರ ಬೆಳಗ್ಗೆ 10ಗಂಟೆಗೆ ಶ್ರೀ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದ ಗಿರಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.

ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರಿಂದ ಉದ್ಘಾಟನೆ ಮಾಡಲಿದ್ದಾರೆ..

ಟ್ರಸ್ಟ್ ನ ಜಿ.ಬಿ ಪಟಾಲಪ್ಪ, ಜಿ.ಎಂ ಚನ್ನಪ್ಪ, ಜಿ.ಕೆ ಶ್ರೀಧರ್ ಸೇರಿದಂತೆ ಇತರರು ಕಾರ್ಯಕ್ರಮವನ್ನು ನೆರವೇರಿಸಿಕೊಡಲಿದ್ದಾರೆ..

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago