Categories: ರಾಜ್ಯ

ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿ ಬಾಕಿ: 2 ತಿಂಗಳಲ್ಲಿ ಪೂರ್ಣಗೊಳಿಸಲು ಗಡುವು

ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿವೆ. ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್‌ಫಾರ್ಮರ್‌ ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ ವೆಲ್‌ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದರು.

ನಗರ ಸ್ಥಳೀಯ ಸಂಸ್ಥೆಗಳ 1,200 ವಾರ್ಡುಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಿಗೆ 27 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವೆಡೆ ಬೋರ್‌ವೆಲ್‌ಗಳನ್ನು ಕೊರೆಯಲು, ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಚರಂಡಿ ನೀರಿನ ಪೈಪ್ ಲೈನ್, ಕುಡಿಯುವ ನೀರಿನ ಪೈಪ್ ಲೈನ್ ನೊಂದಿಗೆ ಸೇರುವ  ಕಡೆಗಳಲ್ಲಿ ಪೈಪ್ ಲೈನ್ ಸ್ಥಳಾಂತರಗೊಳಿಸಬೇಕು. ಕಾಂಕ್ರೀಟ್ ರಸ್ತೆಗಳನ್ನು ಹಾಕುವ ಸಂದರ್ಭದಲ್ಲಿ ಯುಜಿಡಿ ಲೈನ್ ಹಾಗೂ ನೀರಿನ ಲೈನ್ ಗಳನ್ನು ಹಾಕುವ ಮುನ್ನ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕೆಂದರು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬೆಳವಣಿಗೆಯಲ್ಲಿ ಇಳಿಕೆಯಾಗಿದೆ. ಕೆಲವು ಜಿಲ್ಲೆಯಲ್ಲಿ ಬೆಳವಣಿಗೆಯ ಪ್ರಮಾಣ ಶೇ5 ಕ್ಕಿಂತ ಕಡಿಮೆ ಇದೆ. ಇದನ್ನು ಸುಧಾರಿಸಲು ಕ್ರಮ ವಹಿಸಬೇಕು. ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಗೆಯನ್ನು ಯಾರೂ ಉಳಿಸಿಕೊಳ್ಳುವುದಿಲ್ಲ. ಕಟ್ಟದಿದ್ದವರಿಗೆ  ನೋಟೀಸು ಕೊಟ್ಟು ಕಟ್ಟಲು ಕಾಲಮಿತಿ ನಿಗದಿ ಮಾಡಬೇಕು ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವುದು ಕಳವಳಕಾರಿ ಬೆಳವಣಿಗೆ. ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ & ಪಿಎನ್‌ಡಿಟಿ ಕಾಯ್ದೆಯನ್ವಯ ಸ್ಕ್ಯಾನಿಂಗ್‌ ಕೇಂದ್ರಗಳ ತಪಾಸಣೆ ನಡೆಸಬೇಕು. ಗರ್ಭಿಣಿ ಮಹಿಳೆಯರ ದತ್ತಾಂಶದ ಮೇಲೆ ಜಿಲ್ಲಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದರು.

2015 ರಲ್ಲಿ ಉತ್ತಮ ಸೂಚ್ಯಂಕ ಹೊಂದಿದ್ದ ಕೆಲವು ಜಿಲ್ಲೆಗಳು 2022 ರಲ್ಲಿ ಕುಸಿತ ಕಂಡಿವೆ. ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಣ್ಣುಮಕ್ಕಳು ಹಾಗೂ ಮಹಿಳೆಯರಲ್ಲಿ ಅನೀಮಿಯಾ ಮತ್ತು ಅಪೌಷ್ಟಿಕತೆಯ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು. ತಾಯಿ ಮರಣ ತಪಾಸಣೆಯನ್ನು (Death Audit) ಜಿಲ್ಲಾಧಿಕಾರಿಗಳು ನಿಯಮಿತವಾಗಿ ನಡೆಸಬೇಕು. ಲಸಿಕೆ ಕಾರ್ಯಕ್ರಮಗಳಲ್ಲಿಯೂ ಸಾಧನೆ ಉತ್ತಮಪಡಿಸಬೇಕು ಎಂದು ತಿಳಿಸಿದರು‌.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಹಾಸ್ಟೆಲುಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸೂಚಿಸಲಾಯಿತು.

2,443 ಹಾಸ್ಟೆಲುಗಳಲ್ಲಿ ಕೇವಲ 981 ಹಾಸ್ಟೆಲುಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 1462 ಹಾಸ್ಟೆಲುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದರು.

ಪ್ರತಿ ತಿಂಗಳು ಹಾಸ್ಟೆಲುಗಳಿಗೆ ದಿಢೀರ್‌ ಭೇಟಿ ಮಾಡಬೇಕು. ಇದರಿಂದ ಹಾಸ್ಟೆಲುಗಳ ಕುಂದುಕೊರತೆ, ಆಹಾರದ ಗುಣಮಟ್ಟ ಮತ್ತಿತರ ಸಮಸ್ಯೆಗಳು ಅರಿವಿಗೆ ಬರುತ್ತವೆ. ನಗರ ಸ್ಥಳೀಯ ಸಂಸ್ಥೆಗಳು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೀಟ್‌ ಪಂಪ್‌ಗಳನ್ನು ಒದಗಿಸಬೇಕು. ಹಾಸ್ಟೆಲುಗಳ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಸ್ಟೆಲುಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಹಾಸ್ಟೆಲುಗಳಿಗೆ ತಡೆಗೋಡೆ ಆವರಣ ನಿರ್ಮಿಸಲು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

5 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

9 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago