ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ ಅಂದರೆ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು, ಮತ್ತು ಪಾರ್ಸಿ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ:-
ಅ) ಏತ ನೀರಾವರಿ ಯೋಜನೆ
ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್ಲೈನ್ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಞರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು, ಏತ ನೀರಾವರಿ ಯೋಜನೆಯ ಘಟಕ ವೆಚ್ಚವನ್ನು ಪ್ರತಿ ಎಕರೆಗೆ ರೂ.40,000/- ದಂತೆ ಬಿಡುಗಡೆ ಮಾಡಲಾಗುವುದು, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.
ಆ) ವೈಯಕ್ತಿಕ ಕೊಳವೆ ಬಾವಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂ ವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆ ಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಕೊಳವೆ ಮೂಲಕ ಕೃಷಿಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.
ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆ ಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್ ಸೆಟ್ನ್ನು ಅಳವಡಿಸಲಾಗುವುದು. ಪಂಪ್ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.4.00 ಲಕ್ಷಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಗದಿಪಡಿಸಿರುತ್ತದೆ. ಈ ಮೊತ್ತವು ಕೊಳವೆಬಾವಿ ಕೊರೆಯುವಿಕೆ, ಪಂಪು, ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಠೇವಣಿ ಮೊತ್ತ ಒಳಗೊಂಡಿರುತ್ತದೆ.
ವಿದ್ಯುದ್ದೀಕರಣ ಠೇವಣಿ ರೂ.75000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ಎಸ್ಕಾಂಗಳಿಗೆ ಪಾವತಿಸಲಾಗುವುದು. ಈಗಾಗಲೇ ತಮ್ಮ ಜಮೀನಿಗೆ ನೀರಾವರಿ ಸೌಲಭ್ಯವನ್ನು ಹೊಂದಿರುವ ರೈತರಿಗೆ ಹನಿ ನೀರಾವರಿ ಅಳವಡಿಸಲು ತೋಟಗಾರಿಕೆ ಇಲಾಖೆಯ ಮಾರ್ಗಸೂಚಿ ಪ್ರಕಾರ ಸಹಾಯಧನ ನೀಡುವುದು.
1.ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ
ಧಾರ್ಮಿಕ ಅಲ್ಪಸಂಖ್ಯಾತರ
ಸಮುದಾಯಕ್ಕೆ ಸೇರಿದವರಾಗಿರಬೇಕು.
2. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಜಮೀನಿರಬೇಕು.
3. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
4. ಅರ್ಜಿದಾರರು ಸಣ್ಣ, ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
5.ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.96,000/- ಗಳನ್ನು ಮೀರಬಾರದು.
6. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.
7. ಅಂಬೇಡ್ಕರ ಅಭಿವೃದ್ಧಿ ನಿಗಮ ಮತ್ತು ದೇವರಾಜ್ ಅರಸು ಅಭಿವೃದ್ಧಿ ನಿಗಮಗಳಲ್ಲಿ ಇರುವಂತೆ ಆರ್ಜಿದಾರರ ಗರಿಷ್ಠ ವಯೋಮಿತಿ 55 ವರ್ಷ ಇರುವುದನ್ನು ರದ್ದುಪಡಿಸಲಾಗಿದೆ.
ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ಅರ್ಜಿಯನ್ನು ದಿನಾಂಕ:-22.08.2023 ರಿಂದ 25.09.2023 ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-27681786/ Gmail: kmdcbrural@gmail.com ಸಹಾಯವಾಣಿ ಸಂಖ್ಯೆ:-8277799990 (24*7) ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ
ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…