ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ ಅಂದರೆ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು, ಮತ್ತು ಪಾರ್ಸಿ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ:-

ಅ) ಏತ ನೀರಾವರಿ ಯೋಜನೆ
ಈ ಯೋಜನೆಯಡಿಯಲ್ಲಿ ನಿರಂತರವಾಗಿ ಹರಿಯುತ್ತಿರುವ ನೀರನ್ನು (ನದಿ) ಪೈಪ್‌ಲೈನ್‌ ಮೂಲಕ ಮೇಲಕ್ಕೆ ಎತ್ತಿ, ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ನಿಗಮವು ಅನುಷ್ಠಾನಗೊಳಿಸಿ ನಂತರ ಅದನ್ನು ಫಲಾನುಭವಿಗಳ ಗ್ರಾಹಕರ ಸಹಕಾರ ಸಂಘಕ್ಕೆ ಹಸ್ತಾಂತರ ಮಾಡಲಾಗುವುದು. ಉತ್ತಮ ಬೆಳೆ ಪಡೆಯುವ ಸಲುವಾಗಿ ಕೃಷಿ ತಜ್ಞರಿಂದ ಸಲಹೆ ಮತ್ತು ನೆರವನ್ನು ಕೊಡಿಸಲಾಗುವುದು, ಏತ ನೀರಾವರಿ ಯೋಜನೆಯ ಘಟಕ ವೆಚ್ಚವನ್ನು ಪ್ರತಿ ಎಕರೆಗೆ ರೂ.40,000/- ದಂತೆ ಬಿಡುಗಡೆ ಮಾಡಲಾಗುವುದು, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.

ಆ) ವೈಯಕ್ತಿಕ ಕೊಳವೆ ಬಾವಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಲ್ಲಿ ಹರಿಯುವ ನೀರಿನ ವ್ಯವಸ್ಥೆ ಲಭ್ಯವಿರುವುದಿಲ್ಲವೋ ಅಂತಹ ಸ್ಥಳದಲ್ಲಿ ತಜ್ಞ ಭೂ ವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲ ಬಿಂದು ವ್ಯಾಪ್ತಿಯೊಳಗೆ ನೆಲದಡಿಯಲ್ಲಿ ಕೊಳವೆ ಬಾವಿಯನ್ನು ಕೊರೆದು, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಕೊಳವೆ ಮೂಲಕ ಕೃಷಿಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ.

ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆ ಬಾವಿ ಕೊರೆಯಿಸಿ ಅಥವಾ ತೆರೆದ ಬಾವಿಯನ್ನು ನಿರ್ಮಿಸಿ, ಅದಕ್ಕೆ ನಿಗಮದಿಂದ ಪಂಪ್‌ ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್‌ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.4.00 ಲಕ್ಷಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಗದಿಪಡಿಸಿರುತ್ತದೆ.  ಈ ಮೊತ್ತವು ಕೊಳವೆಬಾವಿ ಕೊರೆಯುವಿಕೆ, ಪಂಪು, ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಠೇವಣಿ ಮೊತ್ತ ಒಳಗೊಂಡಿರುತ್ತದೆ.

ವಿದ್ಯುದ್ದೀಕರಣ ಠೇವಣಿ ರೂ.75000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ಎಸ್ಕಾಂಗಳಿಗೆ ಪಾವತಿಸಲಾಗುವುದು. ಈಗಾಗಲೇ ತಮ್ಮ ಜಮೀನಿಗೆ ನೀರಾವರಿ ಸೌಲಭ್ಯವನ್ನು ಹೊಂದಿರುವ ರೈತರಿಗೆ ಹನಿ ನೀರಾವರಿ ಅಳವಡಿಸಲು ತೋಟಗಾರಿಕೆ ಇಲಾಖೆಯ ಮಾರ್ಗಸೂಚಿ ಪ್ರಕಾರ ಸಹಾಯಧನ ನೀಡುವುದು.

1.ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ
ಧಾರ್ಮಿಕ ಅಲ್ಪಸಂಖ್ಯಾತರ
ಸಮುದಾಯಕ್ಕೆ ಸೇರಿದವರಾಗಿರಬೇಕು.
2. ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಜಮೀನಿರಬೇಕು.
3. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
4. ಅರ್ಜಿದಾರರು ಸಣ್ಣ, ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
5.ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.96,000/- ಗಳನ್ನು ಮೀರಬಾರದು.
6. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.
7. ಅಂಬೇಡ್ಕರ ಅಭಿವೃದ್ಧಿ ನಿಗಮ ಮತ್ತು ದೇವರಾಜ್ ಅರಸು ಅಭಿವೃದ್ಧಿ ನಿಗಮಗಳಲ್ಲಿ ಇರುವಂತೆ ಆರ್ಜಿದಾರರ ಗರಿಷ್ಠ ವಯೋಮಿತಿ 55 ವರ್ಷ ಇರುವುದನ್ನು ರದ್ದುಪಡಿಸಲಾಗಿದೆ.

ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ಅರ್ಜಿಯನ್ನು ದಿನಾಂಕ:-22.08.2023 ರಿಂದ  25.09.2023 ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-27681786/ Gmail: kmdcbrural@gmail.com ಸಹಾಯವಾಣಿ ಸಂಖ್ಯೆ:-8277799990 (24*7) ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ
ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago