ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಗ್ರಾಮದಲ್ಲಿ ಲಕ್ಷ್ಮೀರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ, ಮೇ.3ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.‌

ಇದರ ಅಂಗವಾಗಿ ಬೆಳಗ್ಗೆ 8ರಿಂದ ಸಂಜೆ 8ರವರೆಗೆ ವಾಲಿಬಾಲ್ ಸ್ಪರ್ಧೆ, ಮಧ್ಯಾಹ್ನ 3ಗಂಟೆಯಿಂದ ಸಂಜೆ 5ರವರೆಗೆ ರಂಗೋಲಿ ಸ್ಪರ್ಧೆ, ಸಂಜೆ 7ಗಂಟೆಯಿಂದ ರಾತ್ರಿ 10:30ರವರೆಗೆ ಆರ್ಕೆಸ್ಟ್ರಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳಲ್ಲಿ ಗೆದ್ದ ಸ್ಪರ್ಧಾರ್ಥಿಗಳಿಗೆ ಸೂಕ್ತ‌ ನಗದು ಬಹುಮಾನ ನೀಡಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗೋಲಿ ಸ್ಪರ್ಧೆ

ಮೊದಲನೇ ಬಹುಮಾನ 20000/-

ಎರಡನೇ ಬಹುಮಾನ 10000/-

ಮೂರನೇ ಬಹುಮಾನ 5000/-

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನಗಳಿರುತ್ತವೆ.

ವಾಲಿಬಾಲ್ ಪಂದ್ಯಾವಳಿ

ಮೊದಲನೇ ಬಹುಮಾನ 10000/-

ಎರಡನೇ ಬಹುಮಾನ 5000/-

ಮೂರನೇ ಬಹುಮಾನ 2500/-

ಹೆಚ್ಚಿನ ಮಾಹಿತಿಗಾಗಿ ಆಯೋಜಕರಾದ ಗಂಟಿಗಾನಹಳ್ಳಿ ಮುರಳಿ ರಂಗಪ್ಪ 99165 69193 ನ್ನು ಸಂಪರ್ಕಿಸಬಹುದಾಗಿದೆ..

ಈ ವೇಳೆ ಗಂಟಿಗಾನಹಳ್ಳಿ ಗ್ರಾಮಸ್ಥರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪ್ರಾಂಶುಪಾಲರು, ಸಹ/ಸಹಾಯಕ ಪ್ರಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ಬೋಧಕೇತರ ವರ್ಗ, ಕಾಲೇಜು ವಿದ್ಯಾರ್ಥಿ ವೃಂದ ಇರಲಿದ್ದಾರೆ…

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

20 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

20 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago