ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಗ್ರಾಮದಲ್ಲಿ ಲಕ್ಷ್ಮೀರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ, ಮೇ.3ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.
ಇದರ ಅಂಗವಾಗಿ ಬೆಳಗ್ಗೆ 8ರಿಂದ ಸಂಜೆ 8ರವರೆಗೆ ವಾಲಿಬಾಲ್ ಸ್ಪರ್ಧೆ, ಮಧ್ಯಾಹ್ನ 3ಗಂಟೆಯಿಂದ ಸಂಜೆ 5ರವರೆಗೆ ರಂಗೋಲಿ ಸ್ಪರ್ಧೆ, ಸಂಜೆ 7ಗಂಟೆಯಿಂದ ರಾತ್ರಿ 10:30ರವರೆಗೆ ಆರ್ಕೆಸ್ಟ್ರಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಗಳಲ್ಲಿ ಗೆದ್ದ ಸ್ಪರ್ಧಾರ್ಥಿಗಳಿಗೆ ಸೂಕ್ತ ನಗದು ಬಹುಮಾನ ನೀಡಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಂಗೋಲಿ ಸ್ಪರ್ಧೆ
ಮೊದಲನೇ ಬಹುಮಾನ 20000/-
ಎರಡನೇ ಬಹುಮಾನ 10000/-
ಮೂರನೇ ಬಹುಮಾನ 5000/-
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನಗಳಿರುತ್ತವೆ.
ವಾಲಿಬಾಲ್ ಪಂದ್ಯಾವಳಿ
ಮೊದಲನೇ ಬಹುಮಾನ 10000/-
ಎರಡನೇ ಬಹುಮಾನ 5000/-
ಮೂರನೇ ಬಹುಮಾನ 2500/-
ಹೆಚ್ಚಿನ ಮಾಹಿತಿಗಾಗಿ ಆಯೋಜಕರಾದ ಗಂಟಿಗಾನಹಳ್ಳಿ ಮುರಳಿ ರಂಗಪ್ಪ 99165 69193 ನ್ನು ಸಂಪರ್ಕಿಸಬಹುದಾಗಿದೆ..
ಈ ವೇಳೆ ಗಂಟಿಗಾನಹಳ್ಳಿ ಗ್ರಾಮಸ್ಥರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪ್ರಾಂಶುಪಾಲರು, ಸಹ/ಸಹಾಯಕ ಪ್ರಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ಬೋಧಕೇತರ ವರ್ಗ, ಕಾಲೇಜು ವಿದ್ಯಾರ್ಥಿ ವೃಂದ ಇರಲಿದ್ದಾರೆ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…