ಗಂಟಿಗಾನಹಳ್ಳಿ ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ ಚುನಾವಣೆ: ಜೆಡಿಎಸ್ ಮೇಲುಗೈ

775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.

ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ  ಸ್ಪರ್ಧಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು‌ ಬಹುಮತ ಪಡೆದಿದೆ.

ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು.‌ ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.

ಚುನಾವಣೆಯಲ್ಲಿ ಗೆದ್ದವರ ಪಟ್ಟಿ

ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ,  ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.

ಚುನಾವಣೆಗಳಲ್ಲಿ ಸೋಲು‌ ಗೆಲುವು ಸಹಜ, ಆದರೆ, ಸಹಕಾರ ಸಂಘಗಳಿಗೆ ಚುನಾವಣೆ ಆಗಬಾರದು ಎಂದು ನನ್ನ ಭಾವನೆ. ಸಹಾಕರ ಸಂಘಗಳಲ್ಲಿ ಲಾಭಾಂಶ ಕಡಿಮೆ ಇರುತ್ತದೆ. ಆದ್ದರಿಂದ ಚುನಾವಣೆ ನಡೆಯಬಾರದು. ಗಂಟಿಗಾನಹಳ್ಳಿ ಕೃಷಿ ಸಹಕಾರ ಸಂಘವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸದೃಢವಾದ ಸಂಘವಾಗಿ ಇದೆ. ಸಂಘದ ವತಿಯಿಂದ ಗೋಲ್ಡ್ ಲೋನ್, ಸುಮಾರು 6ಕೋಟಿಯಷ್ಟು ರೈತರಿಗೆ ಕೆಸಿಸಿ ಸಾಲವನ್ನು ನೀಡಲಾಗಿದೆ. ಬಡ್ಡಿರಹಿತವಾಗಿ ರೈತರಿಗೆ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ನಮ್ಮ ಊರಿನ ಈ ಸಂಘ ಬಹಳ ಸದೃಢವಾಗಿದೆ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ನಿಗಮ ಅಧ್ಯಕ್ಷ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಹೇಳಿದರು.

ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

7 minutes ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

11 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

15 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

18 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

19 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago