775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.
ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ ಸ್ಪರ್ಧಿಸಿದ್ದರು.
ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು. ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಚುನಾವಣೆಯಲ್ಲಿ ಗೆದ್ದವರ ಪಟ್ಟಿ
ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ, ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.
ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…