775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.
ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ ಸ್ಪರ್ಧಿಸಿದ್ದರು.
ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು. ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಚುನಾವಣೆಯಲ್ಲಿ ಗೆದ್ದವರ ಪಟ್ಟಿ
ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ, ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.
ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…