ಗಂಟಿಗಾನಹಳ್ಳಿ ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ ಚುನಾವಣೆ: ಜೆಡಿಎಸ್ ಮೇಲುಗೈ

775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.

ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ  ಸ್ಪರ್ಧಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು‌ ಬಹುಮತ ಪಡೆದಿದೆ.

ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು.‌ ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.

ಚುನಾವಣೆಯಲ್ಲಿ ಗೆದ್ದವರ ಪಟ್ಟಿ

ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ,  ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.

ಚುನಾವಣೆಗಳಲ್ಲಿ ಸೋಲು‌ ಗೆಲುವು ಸಹಜ, ಆದರೆ, ಸಹಕಾರ ಸಂಘಗಳಿಗೆ ಚುನಾವಣೆ ಆಗಬಾರದು ಎಂದು ನನ್ನ ಭಾವನೆ. ಸಹಾಕರ ಸಂಘಗಳಲ್ಲಿ ಲಾಭಾಂಶ ಕಡಿಮೆ ಇರುತ್ತದೆ. ಆದ್ದರಿಂದ ಚುನಾವಣೆ ನಡೆಯಬಾರದು. ಗಂಟಿಗಾನಹಳ್ಳಿ ಕೃಷಿ ಸಹಕಾರ ಸಂಘವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸದೃಢವಾದ ಸಂಘವಾಗಿ ಇದೆ. ಸಂಘದ ವತಿಯಿಂದ ಗೋಲ್ಡ್ ಲೋನ್, ಸುಮಾರು 6ಕೋಟಿಯಷ್ಟು ರೈತರಿಗೆ ಕೆಸಿಸಿ ಸಾಲವನ್ನು ನೀಡಲಾಗಿದೆ. ಬಡ್ಡಿರಹಿತವಾಗಿ ರೈತರಿಗೆ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ನಮ್ಮ ಊರಿನ ಈ ಸಂಘ ಬಹಳ ಸದೃಢವಾಗಿದೆ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ನಿಗಮ ಅಧ್ಯಕ್ಷ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಹೇಳಿದರು.

ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

7 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago