775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.
ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ ಸ್ಪರ್ಧಿಸಿದ್ದರು.
ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು. ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.
ಚುನಾವಣೆಯಲ್ಲಿ ಗೆದ್ದವರ ಪಟ್ಟಿ
ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ, ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.
ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…