ಗಂಟಿಗಾನಹಳ್ಳಿ ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ ಚುನಾವಣೆ: ಜೆಡಿಎಸ್ ಮೇಲುಗೈ

775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.

ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ  ಸ್ಪರ್ಧಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು‌ ಬಹುಮತ ಪಡೆದಿದೆ.

ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು.‌ ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.

ಚುನಾವಣೆಯಲ್ಲಿ ಗೆದ್ದವರ ಪಟ್ಟಿ

ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ,  ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.

ಚುನಾವಣೆಗಳಲ್ಲಿ ಸೋಲು‌ ಗೆಲುವು ಸಹಜ, ಆದರೆ, ಸಹಕಾರ ಸಂಘಗಳಿಗೆ ಚುನಾವಣೆ ಆಗಬಾರದು ಎಂದು ನನ್ನ ಭಾವನೆ. ಸಹಾಕರ ಸಂಘಗಳಲ್ಲಿ ಲಾಭಾಂಶ ಕಡಿಮೆ ಇರುತ್ತದೆ. ಆದ್ದರಿಂದ ಚುನಾವಣೆ ನಡೆಯಬಾರದು. ಗಂಟಿಗಾನಹಳ್ಳಿ ಕೃಷಿ ಸಹಕಾರ ಸಂಘವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸದೃಢವಾದ ಸಂಘವಾಗಿ ಇದೆ. ಸಂಘದ ವತಿಯಿಂದ ಗೋಲ್ಡ್ ಲೋನ್, ಸುಮಾರು 6ಕೋಟಿಯಷ್ಟು ರೈತರಿಗೆ ಕೆಸಿಸಿ ಸಾಲವನ್ನು ನೀಡಲಾಗಿದೆ. ಬಡ್ಡಿರಹಿತವಾಗಿ ರೈತರಿಗೆ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ನಮ್ಮ ಊರಿನ ಈ ಸಂಘ ಬಹಳ ಸದೃಢವಾಗಿದೆ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ನಿಗಮ ಅಧ್ಯಕ್ಷ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಹೇಳಿದರು.

ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

18 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago