ಗಂಟಿಗಾನಹಳ್ಳಿ ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ ಚುನಾವಣೆ: ಜೆಡಿಎಸ್ ಮೇಲುಗೈ

775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.

ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ  ಸ್ಪರ್ಧಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು‌ ಬಹುಮತ ಪಡೆದಿದೆ.

ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು.‌ ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.

ಚುನಾವಣೆಯಲ್ಲಿ ಗೆದ್ದವರ ಪಟ್ಟಿ

ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ,  ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.

ಚುನಾವಣೆಗಳಲ್ಲಿ ಸೋಲು‌ ಗೆಲುವು ಸಹಜ, ಆದರೆ, ಸಹಕಾರ ಸಂಘಗಳಿಗೆ ಚುನಾವಣೆ ಆಗಬಾರದು ಎಂದು ನನ್ನ ಭಾವನೆ. ಸಹಾಕರ ಸಂಘಗಳಲ್ಲಿ ಲಾಭಾಂಶ ಕಡಿಮೆ ಇರುತ್ತದೆ. ಆದ್ದರಿಂದ ಚುನಾವಣೆ ನಡೆಯಬಾರದು. ಗಂಟಿಗಾನಹಳ್ಳಿ ಕೃಷಿ ಸಹಕಾರ ಸಂಘವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸದೃಢವಾದ ಸಂಘವಾಗಿ ಇದೆ. ಸಂಘದ ವತಿಯಿಂದ ಗೋಲ್ಡ್ ಲೋನ್, ಸುಮಾರು 6ಕೋಟಿಯಷ್ಟು ರೈತರಿಗೆ ಕೆಸಿಸಿ ಸಾಲವನ್ನು ನೀಡಲಾಗಿದೆ. ಬಡ್ಡಿರಹಿತವಾಗಿ ರೈತರಿಗೆ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ನಮ್ಮ ಊರಿನ ಈ ಸಂಘ ಬಹಳ ಸದೃಢವಾಗಿದೆ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ನಿಗಮ ಅಧ್ಯಕ್ಷ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಹೇಳಿದರು.

ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

10 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

10 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

16 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 days ago