ಗಂಟಿಗಾನಹಳ್ಳಿ ವಿವಿಧ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ ಚುನಾವಣೆ: ಜೆಡಿಎಸ್ ಮೇಲುಗೈ

775 ಶೇರುದಾರರು ಇರುವ ಗಂಟಿಗಾನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯಿತು.

ಸಂಘದ ಮುಂದಿನ 5 ವರ್ಷದ ಅಧಿಕಾರವಧಿಗೆ ಗುರುವಾರ ಸಂಘದ ಕಚೇರಿಯಲ್ಲಿ 12 ನಿರ್ದೇಶಕರಿಗೆ 24 ಮಂದಿ ಚುನಾವಣೆಗೆ ಸ್ವರ್ಧೆ ಮಾಡಿದ್ದರು. ಸಾಲಗಾರರು ಅಲ್ಲದ ಕ್ಷೇತ್ರದಿಂದ 4 ಮಂದಿ, ಸಾಲಗಾರರ ಕ್ಷೇತ್ರದಿಂದ 37 ಮಂದಿ  ಸ್ಪರ್ಧಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆಯಿಂದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿ 5.30 ಗಂಟೆಗೆ ಮುಕ್ತಾಯವಾಯಿತು. ಇದರಲ್ಲಿ ಜೆಡಿಎಸ್ 8, ಕಾಂಗ್ರೆಸ್ 4 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹೆಚ್ಚು‌ ಬಹುಮತ ಪಡೆದಿದೆ.

ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಜೆಡಿಎಸ್ ಬಿಟ್ಟರೆ ಬೇರೆ ಪಕ್ಷ ಬರುತ್ತಿರಲಿಲ್ಲ, ಆದರೆ, ಇದೀಗ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಸಮರ ನಡೆದಿತ್ತು.‌ ಇದರಲ್ಲಿ ಜೆಡಿಎಸ್ ಹೆಚ್ಚು ಬಹುಮತ ಪಡೆದಿದೆ.

ಚುನಾವಣೆಯಲ್ಲಿ ಗೆದ್ದವರ ಪಟ್ಟಿ

ಸಾಮಾನ್ಯ ಕ್ಷೇತ್ರದಿಂದ ಗೌರೀಶ ಎಸ್, ನಂದೀಶ ಎಂ. ಎಸ್, ಮುರಳಿಧರ್ ಜಿ.ಆರ್, ಶ್ರೀನಿವಾಸ್ ಬಿ.ಎನ್, ಬಸವರಾಜ ಸಿ,  ಹಿಂದುಳಿದ ವರ್ಗದಿಂದ ವಿಜಯಕುಮಾರ್, ಯಸವಂತ್ ಎಸ್.ವಿ,ಹನುಮಂತಪ್ಪ, ರಾಮಕೃಷ್ಣ .ಪಿ, ಶೋಭಾ, ಸುಮಿತ್ರ, ಶಿವಕುಮಾರ್ ಎಂ, ಆಯ್ಕೆಯಾಗಿದ್ದಾರೆ.

ಚುನಾವಣೆಗಳಲ್ಲಿ ಸೋಲು‌ ಗೆಲುವು ಸಹಜ, ಆದರೆ, ಸಹಕಾರ ಸಂಘಗಳಿಗೆ ಚುನಾವಣೆ ಆಗಬಾರದು ಎಂದು ನನ್ನ ಭಾವನೆ. ಸಹಾಕರ ಸಂಘಗಳಲ್ಲಿ ಲಾಭಾಂಶ ಕಡಿಮೆ ಇರುತ್ತದೆ. ಆದ್ದರಿಂದ ಚುನಾವಣೆ ನಡೆಯಬಾರದು. ಗಂಟಿಗಾನಹಳ್ಳಿ ಕೃಷಿ ಸಹಕಾರ ಸಂಘವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸದೃಢವಾದ ಸಂಘವಾಗಿ ಇದೆ. ಸಂಘದ ವತಿಯಿಂದ ಗೋಲ್ಡ್ ಲೋನ್, ಸುಮಾರು 6ಕೋಟಿಯಷ್ಟು ರೈತರಿಗೆ ಕೆಸಿಸಿ ಸಾಲವನ್ನು ನೀಡಲಾಗಿದೆ. ಬಡ್ಡಿರಹಿತವಾಗಿ ರೈತರಿಗೆ ಸಾಲವನ್ನು ನೀಡಲಾಗುತ್ತಿದೆ. ಹಾಗಾಗಿ ನಮ್ಮ ಊರಿನ ಈ ಸಂಘ ಬಹಳ ಸದೃಢವಾಗಿದೆ ಎಂದು ತೆಂಗು ಮತ್ತು ನಾರು ಅಭಿವೃದ್ಧಿ ನಿಗಮ ಅಧ್ಯಕ್ಷ ಗಂಟಿಗಾನಹಳ್ಳಿ ವೆಂಕಟೇಶ್ ಬಾಬು ಹೇಳಿದರು.

ಗಂಟಿಗಾನಹಳ್ಳಿ ವಿಎಸ್ ಎಸ್ ಎನ್ ಚುನಾವಣೆಯಲ್ಲಿ ಮತದಾರರು ಪ್ರಭುಗಳು ನಮ್ಮ ಕೈ ಹಿಡಿದಿದ್ದಾರೆ. ಅವರಿಗೆ ಧನ್ಯವಾದ, ನಮಗೆ ಹೆಚ್ಚಿನ ಬಹುಮತ ಬರಬೇಕಿತ್ತು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಹುಮತ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

15 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

16 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

22 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago