ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ

ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಹಾಗೂ ಉಪಾಧ್ಯಕ್ಷರಾಗಿ ಮುನಿಆಂಜಿನಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

14 ತಿಂಗಳ ಅವಧಿಗೆ ಸಂಬಂಧಿಸಿದಂತೆ ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು, ಅಧ್ಯಕ್ಷ ಸ್ಥಾನಕ್ಕೆ ಸಿ.ಕೆ.ದೇವರಾಜ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮುನಿಆಂಜಿನಪ್ಪ ನಾಮಪತ್ರವನ್ನ ಸಲ್ಲಿಸಿದ್ದರು. ಆದರೆ ಇದಕ್ಕೆ ಬೇರೆ ಯಾರೂ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿಡಿಒ ಮಾಧವರೆಡ್ಡಿ ತಿಳಿಸಿದ್ದಾರೆ.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ನಿರ್ದೇಶಕರು, ಗಣ್ಯರು ಸನ್ಮಾನಿಸಿ ಸಿಹಿಹಂಚಿ ಸಂಭ್ರಮಿಸಿ ಗೌರವಿಸಿದರು.

ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷ ಸಿ.ಕೆ.ದೇವರಾಜ್ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘವು ತಾಲೂಕಿನಲ್ಲೇ ಉನ್ನತ ಸ್ಥಾನಮಾನದಲ್ಲಿದೆ. ಈಗಾಗಲೇ 4 ಕೋಟಿ 8ಲಕ್ಷದ 50 ಸಾವಿರದವರೆಗೆ ಬೆಳೆ ಸಾಲವನ್ನ ರೈತರಿಗೆ ನೀಡಲಾಗಿದೆ. ಈ ಸಾಲವನ್ನ ಹೆಚ್ಚು ಮಾಡಲಾಗುವುದು, ಸಂಘದಡಿಯಲ್ಲಿ ಬರುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.

ನಂತರ ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ಮಾತನಾಡಿ, ಮೊದಲಿನಿಂದಲೂ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿಲ್ಲ, ಎಲ್ಲರನ್ನೂ ಅವಿರೋಧವಾಗಿಯೇ ಆಯ್ಕೆ ಮಾಡಲಾಗುತ್ತಿದೆ. ಸಂಘದ ವತಿಯಿಂದ ರೈತರಿಗೆ ಬೇಕಾಗುವ ರಸಗೊಬ್ಬರಗಳು, ಬಿತ್ತನೆ ಬೀಜಗಳು ಸೇರಿದಂತೆ ಇತರೆ ಸವಲತ್ತುಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆ ಎಂದರು.

ಈ ವೇಳೆ ಜಿ.ಪಂ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಸಂಘದ ನಿರ್ದೇಶಕರು, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

14 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago