ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಅವಿರೋಧವಾಗಿ ಆಯ್ಕೆ

ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಹಾಗೂ ಉಪಾಧ್ಯಕ್ಷರಾಗಿ ಮುನಿಆಂಜಿನಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

14 ತಿಂಗಳ ಅವಧಿಗೆ ಸಂಬಂಧಿಸಿದಂತೆ ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು, ಅಧ್ಯಕ್ಷ ಸ್ಥಾನಕ್ಕೆ ಸಿ.ಕೆ.ದೇವರಾಜ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮುನಿಆಂಜಿನಪ್ಪ ನಾಮಪತ್ರವನ್ನ ಸಲ್ಲಿಸಿದ್ದರು. ಆದರೆ ಇದಕ್ಕೆ ಬೇರೆ ಯಾರೂ ನಾಮಪತ್ರಗಳನ್ನ ಸಲ್ಲಿಸದ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿಡಿಒ ಮಾಧವರೆಡ್ಡಿ ತಿಳಿಸಿದ್ದಾರೆ.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ನಿರ್ದೇಶಕರು, ಗಣ್ಯರು ಸನ್ಮಾನಿಸಿ ಸಿಹಿಹಂಚಿ ಸಂಭ್ರಮಿಸಿ ಗೌರವಿಸಿದರು.

ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷ ಸಿ.ಕೆ.ದೇವರಾಜ್ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಗಂಟಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘವು ತಾಲೂಕಿನಲ್ಲೇ ಉನ್ನತ ಸ್ಥಾನಮಾನದಲ್ಲಿದೆ. ಈಗಾಗಲೇ 4 ಕೋಟಿ 8ಲಕ್ಷದ 50 ಸಾವಿರದವರೆಗೆ ಬೆಳೆ ಸಾಲವನ್ನ ರೈತರಿಗೆ ನೀಡಲಾಗಿದೆ. ಈ ಸಾಲವನ್ನ ಹೆಚ್ಚು ಮಾಡಲಾಗುವುದು, ಸಂಘದಡಿಯಲ್ಲಿ ಬರುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.

ನಂತರ ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ಮಾತನಾಡಿ, ಮೊದಲಿನಿಂದಲೂ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿಲ್ಲ, ಎಲ್ಲರನ್ನೂ ಅವಿರೋಧವಾಗಿಯೇ ಆಯ್ಕೆ ಮಾಡಲಾಗುತ್ತಿದೆ. ಸಂಘದ ವತಿಯಿಂದ ರೈತರಿಗೆ ಬೇಕಾಗುವ ರಸಗೊಬ್ಬರಗಳು, ಬಿತ್ತನೆ ಬೀಜಗಳು ಸೇರಿದಂತೆ ಇತರೆ ಸವಲತ್ತುಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆ ಎಂದರು.

ಈ ವೇಳೆ ಜಿ.ಪಂ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಸಂಘದ ನಿರ್ದೇಶಕರು, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago