ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ. ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿದ್ದಾಳೆ.
ಪೂಜಶ್ರಿ (28) ಗಂಡನ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೃಹಿಣಿ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ…
ನಂದೀಶ್ ಹಾಗೂ ಪೂಜಶ್ರೀ ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಮದುವೆಯಾಗಿದ್ದರು. ನಂದೀಶ್ ಹಾಗೂ ಪೂಜಶ್ರೀ ದಂಪತಿಗೆ ಒಂದು ಹೆಣ್ಣು ಮಗೂ ಕೂಡ ಇದೆ.
ನಂದೀಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಪೂಜಶ್ರೀ ಕೂಡಾ ಖಾಸಗಿ ಬ್ಯಾಂಕ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಮದುವೆಯಾಗಿ ಒಂದು ವರ್ಷದ ನಂತರ ನಂದೀಶ್ ಗೆ ಅಕ್ರಮ ಸಂಬಂಧ ಇರುವುದು ಬೆಳಕಿಗೆ ಬಂದಿದೆ. ಇದೇ ವಿಚಾರಕ್ಕೆ ಪೂಜಶ್ರೀ ಪ್ರಶ್ನೆ ಮಾಡಿದ್ದರು. ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ದಿನನಿತ್ಯ ನಂದೀಶ್ ಕಿರುಕುಳ ನೀಡುತ್ತದನು. ಜೊತೆಗೆ ವರದಕ್ಷಿಣೆ ಕಿರುಕುಳ ಕೂಡ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ.
ಎರಡು ಮೂರು ಬಾರಿ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಕಿರುಕುಳ ನೀಡೋದಿಲ್ಲ ಅಂತ ಹೇಳಿ ಪೂಜಶ್ರಿ ಯನ್ನ ನಂದೀಶ್ ಮನೆಗೆ ಕರೆದೊಯ್ದಿದ್ದ. ಇದಾದ ಬಳಿಕ ಮೂರು ದಿನಗಳ ಹಿಂದೆ ಇದೇ ರೀತಿ ಜಗಳ ಮಾಡಿದ್ದ. ಹಲ್ಲೆ ಮಾಡಿದ್ದ ಹಿನ್ನೆಲೆ ಪೂಜಶ್ರೀ ತನ್ನ ತಾಯಿ ಮನೆಗೆ ಬಂದಿದ್ದಳು. ಮರು ದಿನ ಬೆಳಿಗ್ಗೆ ನಂದೀಶ್ ಹೆಂಡತಿ ಮನೆಗೆ ಹೋಗಿ ಪೂಜಶ್ರೀಯನ್ನು ಕಥೆ ಕಟ್ಟಿ ಕರೆದುಕೊಂಡು ಹೋಗಿದ್ದ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಜಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆಗೆ ಮೃತದೇಹ ವಿಕ್ಟೋರಿಯಾ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…