ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ. ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿದ್ದಾಳೆ.
ಪೂಜಶ್ರಿ (28) ಗಂಡನ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೃಹಿಣಿ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ…
ನಂದೀಶ್ ಹಾಗೂ ಪೂಜಶ್ರೀ ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಮದುವೆಯಾಗಿದ್ದರು. ನಂದೀಶ್ ಹಾಗೂ ಪೂಜಶ್ರೀ ದಂಪತಿಗೆ ಒಂದು ಹೆಣ್ಣು ಮಗೂ ಕೂಡ ಇದೆ.
ನಂದೀಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಪೂಜಶ್ರೀ ಕೂಡಾ ಖಾಸಗಿ ಬ್ಯಾಂಕ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಮದುವೆಯಾಗಿ ಒಂದು ವರ್ಷದ ನಂತರ ನಂದೀಶ್ ಗೆ ಅಕ್ರಮ ಸಂಬಂಧ ಇರುವುದು ಬೆಳಕಿಗೆ ಬಂದಿದೆ. ಇದೇ ವಿಚಾರಕ್ಕೆ ಪೂಜಶ್ರೀ ಪ್ರಶ್ನೆ ಮಾಡಿದ್ದರು. ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ದಿನನಿತ್ಯ ನಂದೀಶ್ ಕಿರುಕುಳ ನೀಡುತ್ತದನು. ಜೊತೆಗೆ ವರದಕ್ಷಿಣೆ ಕಿರುಕುಳ ಕೂಡ ನೀಡುತ್ತಿದ್ದನು ಎಂದು ಆರೋಪಿಸಲಾಗಿದೆ.
ಎರಡು ಮೂರು ಬಾರಿ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಕಿರುಕುಳ ನೀಡೋದಿಲ್ಲ ಅಂತ ಹೇಳಿ ಪೂಜಶ್ರಿ ಯನ್ನ ನಂದೀಶ್ ಮನೆಗೆ ಕರೆದೊಯ್ದಿದ್ದ. ಇದಾದ ಬಳಿಕ ಮೂರು ದಿನಗಳ ಹಿಂದೆ ಇದೇ ರೀತಿ ಜಗಳ ಮಾಡಿದ್ದ. ಹಲ್ಲೆ ಮಾಡಿದ್ದ ಹಿನ್ನೆಲೆ ಪೂಜಶ್ರೀ ತನ್ನ ತಾಯಿ ಮನೆಗೆ ಬಂದಿದ್ದಳು. ಮರು ದಿನ ಬೆಳಿಗ್ಗೆ ನಂದೀಶ್ ಹೆಂಡತಿ ಮನೆಗೆ ಹೋಗಿ ಪೂಜಶ್ರೀಯನ್ನು ಕಥೆ ಕಟ್ಟಿ ಕರೆದುಕೊಂಡು ಹೋಗಿದ್ದ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಜಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆಗೆ ಮೃತದೇಹ ವಿಕ್ಟೋರಿಯಾ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…