ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಗೃಹಿಣಿಯದ್ದು ಆತ್ಮಹತ್ಯೆಯಲ್ಲ ಕೊಲೆ ಅಂತ ಗೃಹಿಣಿಯ ತವರು ಮನೆಯವರ ಆರೋಪ

ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ ಜಾಸ್ತಿಯಾಗಿತ್ತು. ಹೀಗೆ ಕುಡಿದು ಮನೆಗೆ ಬಂದ ಗಂಡ ಪತ್ನಿಯನ್ನ ಹಿಂಸೆಕೊಟ್ಟಿದ್ದು, ಗಂಡನ ಕಾಟಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿದ್ರೆ, ಇತ್ತ ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ಓದಿ….

ಈ ಪೋಟೊದಲ್ಲಿ ಕಾಣಿಸುತ್ತಿರೋ ಈ ಗೃಹಿಣಿ ಹೆಸರು ಸಂಧ್ಯಾ (27). ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಬೆಳಮಂಗಲ ಗ್ರಾಮದ ಈಕೆಯನ್ನ, ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.

ಕಳೆದ 7 ವರ್ಷಗಳಿಂದೆ ಬೊಮ್ಮವಾರ ಗ್ರಾಮದ ಅನಂತ್ ಕುಮಾರ್ ಎಂಬುವವನ್ನ ವರಿಸಿದ್ದ ಈಕೆ ಆರಂಭದಲ್ಲಿ ಸಂಸಾರ ಚೆನ್ನಾಗಿತ್ತು. ಆದ್ರೆ ದಿನ ಕಳೆದಂತೆ ಗಂಡ ಕುಡಿತದ ದಾಸನಾಗಿ ಮನೆಗೆ ಬಂದವನು ಪತ್ನಿಗೆ ಚಿತ್ರಹಿಂಸೆ ಕೊಡ್ತಿದ್ದನಂತೆ. ಹೀಗೆ ಪತ್ನಿಗೆ ಪ್ರತಿನಿತ್ಯ ಪತ್ನಿಗೆ ಕಿರುಕುಳ ಕೊಡ್ತಿದ್ದು ನಿನ್ನೆಯು ಸಹ ಕುಡಿದು ಬಂದ ಗಂಡ ಅನಂತ್ ಪತ್ನಿಯ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದನಂತೆ. ಇದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಂದಹಾಗೆ ಗಂಡ ಅನಂತ್ ಕುಮಾರ್ ಮತ್ತು ಕುಟುಂಬಸ್ಥರ ಕಿರುಕುಳದಿಂದ ಮಹಿಳೆ ಸಾವು ಆರೋಪದ ಜೊತೆಗೆ ಗಂಡನ ಮನೆಯವರನ್ನ ಬಂಧಿಸುವಂತೆ‌ ವಿಶ್ವನಾಥಪುರ ಪೊಲೀಸ್ ಠಾಣೆ ಬಳಿ ಕಾರಿನಲ್ಲಿ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯ ತವರು ಮನೆಯವರಿಂದ ಗಂಡನ ಮನೆಯವರ ವಿರುದ್ದ ಕೊಲೆ ಆರೋಪ ಮಾಡಿದ್ದು, ಗೃಹಿಣಿ ಸಾವನ್ನಪುತ್ತಿದ್ದಂತೆ ಗಂಡ ಹಾಗೂ ಮನೆಯವರು ನಾಪತ್ತೆಯಾಗಿದ್ದರಂತೆ. ಹೀಗಾಗಿ ಪೊಲೀಸ್ ಠಾಣೆ ಮುಂದೆ ಕಾರಿನಲ್ಲೆ ಶವತಂದು ಈ ಕೂಡಲೇ ಗಂಡ ಅನಂತ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಒಟ್ಟಾರೆ, ಆತ್ಮಹತ್ಯೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಇದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬೆಳಕಿಗೆ ಬರಬೇಕಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

5 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

10 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

10 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

18 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago