ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ ಜಾಸ್ತಿಯಾಗಿತ್ತು. ಹೀಗೆ ಕುಡಿದು ಮನೆಗೆ ಬಂದ ಗಂಡ ಪತ್ನಿಯನ್ನ ಹಿಂಸೆಕೊಟ್ಟಿದ್ದು, ಗಂಡನ ಕಾಟಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿದ್ರೆ, ಇತ್ತ ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ಓದಿ….
ಈ ಪೋಟೊದಲ್ಲಿ ಕಾಣಿಸುತ್ತಿರೋ ಈ ಗೃಹಿಣಿ ಹೆಸರು ಸಂಧ್ಯಾ (27). ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಬೆಳಮಂಗಲ ಗ್ರಾಮದ ಈಕೆಯನ್ನ, ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.
ಕಳೆದ 7 ವರ್ಷಗಳಿಂದೆ ಬೊಮ್ಮವಾರ ಗ್ರಾಮದ ಅನಂತ್ ಕುಮಾರ್ ಎಂಬುವವನ್ನ ವರಿಸಿದ್ದ ಈಕೆ ಆರಂಭದಲ್ಲಿ ಸಂಸಾರ ಚೆನ್ನಾಗಿತ್ತು. ಆದ್ರೆ ದಿನ ಕಳೆದಂತೆ ಗಂಡ ಕುಡಿತದ ದಾಸನಾಗಿ ಮನೆಗೆ ಬಂದವನು ಪತ್ನಿಗೆ ಚಿತ್ರಹಿಂಸೆ ಕೊಡ್ತಿದ್ದನಂತೆ. ಹೀಗೆ ಪತ್ನಿಗೆ ಪ್ರತಿನಿತ್ಯ ಪತ್ನಿಗೆ ಕಿರುಕುಳ ಕೊಡ್ತಿದ್ದು ನಿನ್ನೆಯು ಸಹ ಕುಡಿದು ಬಂದ ಗಂಡ ಅನಂತ್ ಪತ್ನಿಯ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದನಂತೆ. ಇದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಂದಹಾಗೆ ಗಂಡ ಅನಂತ್ ಕುಮಾರ್ ಮತ್ತು ಕುಟುಂಬಸ್ಥರ ಕಿರುಕುಳದಿಂದ ಮಹಿಳೆ ಸಾವು ಆರೋಪದ ಜೊತೆಗೆ ಗಂಡನ ಮನೆಯವರನ್ನ ಬಂಧಿಸುವಂತೆ ವಿಶ್ವನಾಥಪುರ ಪೊಲೀಸ್ ಠಾಣೆ ಬಳಿ ಕಾರಿನಲ್ಲಿ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಮಹಿಳೆಯ ತವರು ಮನೆಯವರಿಂದ ಗಂಡನ ಮನೆಯವರ ವಿರುದ್ದ ಕೊಲೆ ಆರೋಪ ಮಾಡಿದ್ದು, ಗೃಹಿಣಿ ಸಾವನ್ನಪುತ್ತಿದ್ದಂತೆ ಗಂಡ ಹಾಗೂ ಮನೆಯವರು ನಾಪತ್ತೆಯಾಗಿದ್ದರಂತೆ. ಹೀಗಾಗಿ ಪೊಲೀಸ್ ಠಾಣೆ ಮುಂದೆ ಕಾರಿನಲ್ಲೆ ಶವತಂದು ಈ ಕೂಡಲೇ ಗಂಡ ಅನಂತ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಒಟ್ಟಾರೆ, ಆತ್ಮಹತ್ಯೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಇದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬೆಳಕಿಗೆ ಬರಬೇಕಿದೆ.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…