ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ ಜಾಸ್ತಿಯಾಗಿತ್ತು. ಹೀಗೆ ಕುಡಿದು ಮನೆಗೆ ಬಂದ ಗಂಡ ಪತ್ನಿಯನ್ನ ಹಿಂಸೆಕೊಟ್ಟಿದ್ದು, ಗಂಡನ ಕಾಟಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿದ್ರೆ, ಇತ್ತ ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ಓದಿ….
ಈ ಪೋಟೊದಲ್ಲಿ ಕಾಣಿಸುತ್ತಿರೋ ಈ ಗೃಹಿಣಿ ಹೆಸರು ಸಂಧ್ಯಾ (27). ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಬೆಳಮಂಗಲ ಗ್ರಾಮದ ಈಕೆಯನ್ನ, ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.
ಕಳೆದ 7 ವರ್ಷಗಳಿಂದೆ ಬೊಮ್ಮವಾರ ಗ್ರಾಮದ ಅನಂತ್ ಕುಮಾರ್ ಎಂಬುವವನ್ನ ವರಿಸಿದ್ದ ಈಕೆ ಆರಂಭದಲ್ಲಿ ಸಂಸಾರ ಚೆನ್ನಾಗಿತ್ತು. ಆದ್ರೆ ದಿನ ಕಳೆದಂತೆ ಗಂಡ ಕುಡಿತದ ದಾಸನಾಗಿ ಮನೆಗೆ ಬಂದವನು ಪತ್ನಿಗೆ ಚಿತ್ರಹಿಂಸೆ ಕೊಡ್ತಿದ್ದನಂತೆ. ಹೀಗೆ ಪತ್ನಿಗೆ ಪ್ರತಿನಿತ್ಯ ಪತ್ನಿಗೆ ಕಿರುಕುಳ ಕೊಡ್ತಿದ್ದು ನಿನ್ನೆಯು ಸಹ ಕುಡಿದು ಬಂದ ಗಂಡ ಅನಂತ್ ಪತ್ನಿಯ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದನಂತೆ. ಇದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಂದಹಾಗೆ ಗಂಡ ಅನಂತ್ ಕುಮಾರ್ ಮತ್ತು ಕುಟುಂಬಸ್ಥರ ಕಿರುಕುಳದಿಂದ ಮಹಿಳೆ ಸಾವು ಆರೋಪದ ಜೊತೆಗೆ ಗಂಡನ ಮನೆಯವರನ್ನ ಬಂಧಿಸುವಂತೆ ವಿಶ್ವನಾಥಪುರ ಪೊಲೀಸ್ ಠಾಣೆ ಬಳಿ ಕಾರಿನಲ್ಲಿ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಮಹಿಳೆಯ ತವರು ಮನೆಯವರಿಂದ ಗಂಡನ ಮನೆಯವರ ವಿರುದ್ದ ಕೊಲೆ ಆರೋಪ ಮಾಡಿದ್ದು, ಗೃಹಿಣಿ ಸಾವನ್ನಪುತ್ತಿದ್ದಂತೆ ಗಂಡ ಹಾಗೂ ಮನೆಯವರು ನಾಪತ್ತೆಯಾಗಿದ್ದರಂತೆ. ಹೀಗಾಗಿ ಪೊಲೀಸ್ ಠಾಣೆ ಮುಂದೆ ಕಾರಿನಲ್ಲೆ ಶವತಂದು ಈ ಕೂಡಲೇ ಗಂಡ ಅನಂತ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಒಟ್ಟಾರೆ, ಆತ್ಮಹತ್ಯೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಇದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬೆಳಕಿಗೆ ಬರಬೇಕಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…