ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ ಜಾಸ್ತಿಯಾಗಿತ್ತು. ಹೀಗೆ ಕುಡಿದು ಮನೆಗೆ ಬಂದ ಗಂಡ ಪತ್ನಿಯನ್ನ ಹಿಂಸೆಕೊಟ್ಟಿದ್ದು, ಗಂಡನ ಕಾಟಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿದ್ರೆ, ಇತ್ತ ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ಓದಿ….
ಈ ಪೋಟೊದಲ್ಲಿ ಕಾಣಿಸುತ್ತಿರೋ ಈ ಗೃಹಿಣಿ ಹೆಸರು ಸಂಧ್ಯಾ (27). ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಬೆಳಮಂಗಲ ಗ್ರಾಮದ ಈಕೆಯನ್ನ, ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.
ಕಳೆದ 7 ವರ್ಷಗಳಿಂದೆ ಬೊಮ್ಮವಾರ ಗ್ರಾಮದ ಅನಂತ್ ಕುಮಾರ್ ಎಂಬುವವನ್ನ ವರಿಸಿದ್ದ ಈಕೆ ಆರಂಭದಲ್ಲಿ ಸಂಸಾರ ಚೆನ್ನಾಗಿತ್ತು. ಆದ್ರೆ ದಿನ ಕಳೆದಂತೆ ಗಂಡ ಕುಡಿತದ ದಾಸನಾಗಿ ಮನೆಗೆ ಬಂದವನು ಪತ್ನಿಗೆ ಚಿತ್ರಹಿಂಸೆ ಕೊಡ್ತಿದ್ದನಂತೆ. ಹೀಗೆ ಪತ್ನಿಗೆ ಪ್ರತಿನಿತ್ಯ ಪತ್ನಿಗೆ ಕಿರುಕುಳ ಕೊಡ್ತಿದ್ದು ನಿನ್ನೆಯು ಸಹ ಕುಡಿದು ಬಂದ ಗಂಡ ಅನಂತ್ ಪತ್ನಿಯ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದನಂತೆ. ಇದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಂದಹಾಗೆ ಗಂಡ ಅನಂತ್ ಕುಮಾರ್ ಮತ್ತು ಕುಟುಂಬಸ್ಥರ ಕಿರುಕುಳದಿಂದ ಮಹಿಳೆ ಸಾವು ಆರೋಪದ ಜೊತೆಗೆ ಗಂಡನ ಮನೆಯವರನ್ನ ಬಂಧಿಸುವಂತೆ ವಿಶ್ವನಾಥಪುರ ಪೊಲೀಸ್ ಠಾಣೆ ಬಳಿ ಕಾರಿನಲ್ಲಿ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಮಹಿಳೆಯ ತವರು ಮನೆಯವರಿಂದ ಗಂಡನ ಮನೆಯವರ ವಿರುದ್ದ ಕೊಲೆ ಆರೋಪ ಮಾಡಿದ್ದು, ಗೃಹಿಣಿ ಸಾವನ್ನಪುತ್ತಿದ್ದಂತೆ ಗಂಡ ಹಾಗೂ ಮನೆಯವರು ನಾಪತ್ತೆಯಾಗಿದ್ದರಂತೆ. ಹೀಗಾಗಿ ಪೊಲೀಸ್ ಠಾಣೆ ಮುಂದೆ ಕಾರಿನಲ್ಲೆ ಶವತಂದು ಈ ಕೂಡಲೇ ಗಂಡ ಅನಂತ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಒಟ್ಟಾರೆ, ಆತ್ಮಹತ್ಯೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಇದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬೆಳಕಿಗೆ ಬರಬೇಕಿದೆ.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…