ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಗೃಹಿಣಿಯದ್ದು ಆತ್ಮಹತ್ಯೆಯಲ್ಲ ಕೊಲೆ ಅಂತ ಗೃಹಿಣಿಯ ತವರು ಮನೆಯವರ ಆರೋಪ

ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ ಜಾಸ್ತಿಯಾಗಿತ್ತು. ಹೀಗೆ ಕುಡಿದು ಮನೆಗೆ ಬಂದ ಗಂಡ ಪತ್ನಿಯನ್ನ ಹಿಂಸೆಕೊಟ್ಟಿದ್ದು, ಗಂಡನ ಕಾಟಕ್ಕೆ ಬೇಸತ್ತ ಪತ್ನಿ ನೇಣಿಗೆ ಶರಣಾಗಿದ್ರೆ, ಇತ್ತ ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ಓದಿ….

ಈ ಪೋಟೊದಲ್ಲಿ ಕಾಣಿಸುತ್ತಿರೋ ಈ ಗೃಹಿಣಿ ಹೆಸರು ಸಂಧ್ಯಾ (27). ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಬೆಳಮಂಗಲ ಗ್ರಾಮದ ಈಕೆಯನ್ನ, ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.

ಕಳೆದ 7 ವರ್ಷಗಳಿಂದೆ ಬೊಮ್ಮವಾರ ಗ್ರಾಮದ ಅನಂತ್ ಕುಮಾರ್ ಎಂಬುವವನ್ನ ವರಿಸಿದ್ದ ಈಕೆ ಆರಂಭದಲ್ಲಿ ಸಂಸಾರ ಚೆನ್ನಾಗಿತ್ತು. ಆದ್ರೆ ದಿನ ಕಳೆದಂತೆ ಗಂಡ ಕುಡಿತದ ದಾಸನಾಗಿ ಮನೆಗೆ ಬಂದವನು ಪತ್ನಿಗೆ ಚಿತ್ರಹಿಂಸೆ ಕೊಡ್ತಿದ್ದನಂತೆ. ಹೀಗೆ ಪತ್ನಿಗೆ ಪ್ರತಿನಿತ್ಯ ಪತ್ನಿಗೆ ಕಿರುಕುಳ ಕೊಡ್ತಿದ್ದು ನಿನ್ನೆಯು ಸಹ ಕುಡಿದು ಬಂದ ಗಂಡ ಅನಂತ್ ಪತ್ನಿಯ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದನಂತೆ. ಇದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಂದಹಾಗೆ ಗಂಡ ಅನಂತ್ ಕುಮಾರ್ ಮತ್ತು ಕುಟುಂಬಸ್ಥರ ಕಿರುಕುಳದಿಂದ ಮಹಿಳೆ ಸಾವು ಆರೋಪದ ಜೊತೆಗೆ ಗಂಡನ ಮನೆಯವರನ್ನ ಬಂಧಿಸುವಂತೆ‌ ವಿಶ್ವನಾಥಪುರ ಪೊಲೀಸ್ ಠಾಣೆ ಬಳಿ ಕಾರಿನಲ್ಲಿ ಶವವಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯ ತವರು ಮನೆಯವರಿಂದ ಗಂಡನ ಮನೆಯವರ ವಿರುದ್ದ ಕೊಲೆ ಆರೋಪ ಮಾಡಿದ್ದು, ಗೃಹಿಣಿ ಸಾವನ್ನಪುತ್ತಿದ್ದಂತೆ ಗಂಡ ಹಾಗೂ ಮನೆಯವರು ನಾಪತ್ತೆಯಾಗಿದ್ದರಂತೆ. ಹೀಗಾಗಿ ಪೊಲೀಸ್ ಠಾಣೆ ಮುಂದೆ ಕಾರಿನಲ್ಲೆ ಶವತಂದು ಈ ಕೂಡಲೇ ಗಂಡ ಅನಂತ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಒಟ್ಟಾರೆ, ಆತ್ಮಹತ್ಯೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಇದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬೆಳಕಿಗೆ ಬರಬೇಕಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

9 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago