ಗಂಡನ ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ಬಲಿ

ಮದುವೆಯಾಗಿ ಒಂದು ವರ್ಷ ಸಹ ಆಗಿರಲಿಲ್ಲ, ಪದೇ ಪದೇ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಧನದಾಹಿ ಗಂಡ, ಹೊಟ್ಟೆಯಲ್ಲಿದ್ದ ಒಂದೂವರೆ ತಿಂಗಳ ಶಿಶುವನ್ನ ಗರ್ಭಪಾತ ಮಾಡಿಸಿದ ಅತ್ತೆ, ಗಂಡನ ಮನೆಯವರ ಕಿರುಕುಳದಿಂದ ನವ ವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯಲ್ಲಿ ಘಟನೆ ನಡೆದಿದ್ದು, ಸುಮಾರು 22 ವರ್ಷದ ನವ ವಿವಾಹಿತೆ ತನುಶ್ರೀ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾಳೆ, ಆಕೆಯ ಸಾವಿನ ಸುದ್ದಿಯನ್ನು ತವರು ಮನೆಗೆ ತಿಳಿಸದ ಗಂಡನ ಮನೆಯವರು ಪರಾರಿಯಾಗಿದ್ದಾರೆ, ಮೂರನೇ ವ್ಯಕ್ತಿಗಳಿಂದ ಸಾವಿನ ಸುದ್ದಿ ತಿಳಿದು ಬಂದ ಹೆತ್ತವರಿಗೆ ಮಗಳ ಮುಖವನ್ನು ನೋಡಲು ಸಾಧ್ಯವಾಗದೆ ಕಣ್ಣಿರೀಡುತ್ತಿದ್ದಾರೆ.

ಮೃತ ತನುಶ್ರೀ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜಂಗಮಸೀಗೆಹಳ್ಳಿಯ ನಿವಾಸಿ, ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯ ನವೀನ್ ಕುಮಾರ್ ಜೊತೆ ತನುಶ್ರೀಯ ಮದುವೆ ಮಾಡಲಾಗಿತ್ತು. ಮದುವೆ ಸಮಯದಲ್ಲಿ 750 ಗ್ರಾಂ ಚಿನ್ನಾಭರಣ ಸೇರದಂತೆ ದೊಡ್ಡಬಳ್ಳಾಪುರ ನಗರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ರು.

ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ನವೀನ್ ಕುಮಾರ್ ಗೆ ಹಣದಾಹ ಇತ್ತು, ವರದಕ್ಷಿಣೆ ಹಣಕ್ಕಾರಿ ಪದೇ ಪದೇ ಹೆಂಡತಿಯನ್ನ ತವರು ಮನೆಗೆ ಕಳಿಸುತ್ತಿದ್ದಾನಂತೆ, ಮಗಳ ಸುಖ ಸಂತೋಷಕ್ಕಾಗಿ ಹೆತ್ತವರು ಹಣವನ್ನ ಕೊಟ್ಟು ಕಳುಸುತ್ತಿದ್ದರು, ಫೆಬ್ರವರಿ 9ರಂದು ಸಹ 1 ಲಕ್ಷ 20 ಸಾವಿರ ಹಣವನ್ನ ಕೊಟ್ಟು ಕಳಿಸಿದರು, ಇಷ್ಟಕ್ಕೂ ಸುಮ್ಮನಾಗದ ಪಾಪಿಗಳು ಮಗಳನ್ನೇ ಕೊಂದು ಹಾಕಿದ್ದಾರೆಂದು ಮೃತಳ ಮನೆಯವರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನುಶ್ರೀ ಕುಟುಂಬಸ್ಥರು ವರದಕ್ಷಿಣಿ ಕಿರುಕುಳದಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ, ತನುಶ್ರೀ ಗಂಡನ ಮನೆಯಲ್ಲಿ ನೇಣು ಹಾಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾಳೆ, ಆದರೆ ಮೃತಳ ಕುಟುಂಬಸ್ಥರು ಅತ್ತೆ ಸುವರ್ಣಮ್ಮ, ಮೈದುನ ಕಿರಣ್ ಕುಮಾರ್, ಗಂಡ ನವೀನ್ ಕುಮಾರ್ ಹೊಡೆದು ಸಾಯಿಸಿದ್ದಾರೆಂದು ಆರೋಪ ಮಾಡಿದ್ದು, ಅವರಿಗೆ ತಕ್ಕ ಶಿಕ್ಷೆಯಾಗಲೇ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

54 minutes ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

5 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

20 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

21 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago