ಗಂಡನ ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ಬಲಿ

ಮದುವೆಯಾಗಿ ಒಂದು ವರ್ಷ ಸಹ ಆಗಿರಲಿಲ್ಲ, ಪದೇ ಪದೇ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಧನದಾಹಿ ಗಂಡ, ಹೊಟ್ಟೆಯಲ್ಲಿದ್ದ ಒಂದೂವರೆ ತಿಂಗಳ ಶಿಶುವನ್ನ ಗರ್ಭಪಾತ ಮಾಡಿಸಿದ ಅತ್ತೆ, ಗಂಡನ ಮನೆಯವರ ಕಿರುಕುಳದಿಂದ ನವ ವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯಲ್ಲಿ ಘಟನೆ ನಡೆದಿದ್ದು, ಸುಮಾರು 22 ವರ್ಷದ ನವ ವಿವಾಹಿತೆ ತನುಶ್ರೀ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾಳೆ, ಆಕೆಯ ಸಾವಿನ ಸುದ್ದಿಯನ್ನು ತವರು ಮನೆಗೆ ತಿಳಿಸದ ಗಂಡನ ಮನೆಯವರು ಪರಾರಿಯಾಗಿದ್ದಾರೆ, ಮೂರನೇ ವ್ಯಕ್ತಿಗಳಿಂದ ಸಾವಿನ ಸುದ್ದಿ ತಿಳಿದು ಬಂದ ಹೆತ್ತವರಿಗೆ ಮಗಳ ಮುಖವನ್ನು ನೋಡಲು ಸಾಧ್ಯವಾಗದೆ ಕಣ್ಣಿರೀಡುತ್ತಿದ್ದಾರೆ.

ಮೃತ ತನುಶ್ರೀ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜಂಗಮಸೀಗೆಹಳ್ಳಿಯ ನಿವಾಸಿ, ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯ ನವೀನ್ ಕುಮಾರ್ ಜೊತೆ ತನುಶ್ರೀಯ ಮದುವೆ ಮಾಡಲಾಗಿತ್ತು. ಮದುವೆ ಸಮಯದಲ್ಲಿ 750 ಗ್ರಾಂ ಚಿನ್ನಾಭರಣ ಸೇರದಂತೆ ದೊಡ್ಡಬಳ್ಳಾಪುರ ನಗರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ರು.

ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ನವೀನ್ ಕುಮಾರ್ ಗೆ ಹಣದಾಹ ಇತ್ತು, ವರದಕ್ಷಿಣೆ ಹಣಕ್ಕಾರಿ ಪದೇ ಪದೇ ಹೆಂಡತಿಯನ್ನ ತವರು ಮನೆಗೆ ಕಳಿಸುತ್ತಿದ್ದಾನಂತೆ, ಮಗಳ ಸುಖ ಸಂತೋಷಕ್ಕಾಗಿ ಹೆತ್ತವರು ಹಣವನ್ನ ಕೊಟ್ಟು ಕಳುಸುತ್ತಿದ್ದರು, ಫೆಬ್ರವರಿ 9ರಂದು ಸಹ 1 ಲಕ್ಷ 20 ಸಾವಿರ ಹಣವನ್ನ ಕೊಟ್ಟು ಕಳಿಸಿದರು, ಇಷ್ಟಕ್ಕೂ ಸುಮ್ಮನಾಗದ ಪಾಪಿಗಳು ಮಗಳನ್ನೇ ಕೊಂದು ಹಾಕಿದ್ದಾರೆಂದು ಮೃತಳ ಮನೆಯವರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನುಶ್ರೀ ಕುಟುಂಬಸ್ಥರು ವರದಕ್ಷಿಣಿ ಕಿರುಕುಳದಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ, ತನುಶ್ರೀ ಗಂಡನ ಮನೆಯಲ್ಲಿ ನೇಣು ಹಾಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾಳೆ, ಆದರೆ ಮೃತಳ ಕುಟುಂಬಸ್ಥರು ಅತ್ತೆ ಸುವರ್ಣಮ್ಮ, ಮೈದುನ ಕಿರಣ್ ಕುಮಾರ್, ಗಂಡ ನವೀನ್ ಕುಮಾರ್ ಹೊಡೆದು ಸಾಯಿಸಿದ್ದಾರೆಂದು ಆರೋಪ ಮಾಡಿದ್ದು, ಅವರಿಗೆ ತಕ್ಕ ಶಿಕ್ಷೆಯಾಗಲೇ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

54 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago