ಗಂಡನ ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ಬಲಿ

ಮದುವೆಯಾಗಿ ಒಂದು ವರ್ಷ ಸಹ ಆಗಿರಲಿಲ್ಲ, ಪದೇ ಪದೇ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಧನದಾಹಿ ಗಂಡ, ಹೊಟ್ಟೆಯಲ್ಲಿದ್ದ ಒಂದೂವರೆ ತಿಂಗಳ ಶಿಶುವನ್ನ ಗರ್ಭಪಾತ ಮಾಡಿಸಿದ ಅತ್ತೆ, ಗಂಡನ ಮನೆಯವರ ಕಿರುಕುಳದಿಂದ ನವ ವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯಲ್ಲಿ ಘಟನೆ ನಡೆದಿದ್ದು, ಸುಮಾರು 22 ವರ್ಷದ ನವ ವಿವಾಹಿತೆ ತನುಶ್ರೀ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾಳೆ, ಆಕೆಯ ಸಾವಿನ ಸುದ್ದಿಯನ್ನು ತವರು ಮನೆಗೆ ತಿಳಿಸದ ಗಂಡನ ಮನೆಯವರು ಪರಾರಿಯಾಗಿದ್ದಾರೆ, ಮೂರನೇ ವ್ಯಕ್ತಿಗಳಿಂದ ಸಾವಿನ ಸುದ್ದಿ ತಿಳಿದು ಬಂದ ಹೆತ್ತವರಿಗೆ ಮಗಳ ಮುಖವನ್ನು ನೋಡಲು ಸಾಧ್ಯವಾಗದೆ ಕಣ್ಣಿರೀಡುತ್ತಿದ್ದಾರೆ.

ಮೃತ ತನುಶ್ರೀ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜಂಗಮಸೀಗೆಹಳ್ಳಿಯ ನಿವಾಸಿ, ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅಂಚರಹಳ್ಳಿಯ ನವೀನ್ ಕುಮಾರ್ ಜೊತೆ ತನುಶ್ರೀಯ ಮದುವೆ ಮಾಡಲಾಗಿತ್ತು. ಮದುವೆ ಸಮಯದಲ್ಲಿ 750 ಗ್ರಾಂ ಚಿನ್ನಾಭರಣ ಸೇರದಂತೆ ದೊಡ್ಡಬಳ್ಳಾಪುರ ನಗರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ರು.

ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ನವೀನ್ ಕುಮಾರ್ ಗೆ ಹಣದಾಹ ಇತ್ತು, ವರದಕ್ಷಿಣೆ ಹಣಕ್ಕಾರಿ ಪದೇ ಪದೇ ಹೆಂಡತಿಯನ್ನ ತವರು ಮನೆಗೆ ಕಳಿಸುತ್ತಿದ್ದಾನಂತೆ, ಮಗಳ ಸುಖ ಸಂತೋಷಕ್ಕಾಗಿ ಹೆತ್ತವರು ಹಣವನ್ನ ಕೊಟ್ಟು ಕಳುಸುತ್ತಿದ್ದರು, ಫೆಬ್ರವರಿ 9ರಂದು ಸಹ 1 ಲಕ್ಷ 20 ಸಾವಿರ ಹಣವನ್ನ ಕೊಟ್ಟು ಕಳಿಸಿದರು, ಇಷ್ಟಕ್ಕೂ ಸುಮ್ಮನಾಗದ ಪಾಪಿಗಳು ಮಗಳನ್ನೇ ಕೊಂದು ಹಾಕಿದ್ದಾರೆಂದು ಮೃತಳ ಮನೆಯವರು ಆರೋಪ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನುಶ್ರೀ ಕುಟುಂಬಸ್ಥರು ವರದಕ್ಷಿಣಿ ಕಿರುಕುಳದಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ, ತನುಶ್ರೀ ಗಂಡನ ಮನೆಯಲ್ಲಿ ನೇಣು ಹಾಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾಳೆ, ಆದರೆ ಮೃತಳ ಕುಟುಂಬಸ್ಥರು ಅತ್ತೆ ಸುವರ್ಣಮ್ಮ, ಮೈದುನ ಕಿರಣ್ ಕುಮಾರ್, ಗಂಡ ನವೀನ್ ಕುಮಾರ್ ಹೊಡೆದು ಸಾಯಿಸಿದ್ದಾರೆಂದು ಆರೋಪ ಮಾಡಿದ್ದು, ಅವರಿಗೆ ತಕ್ಕ ಶಿಕ್ಷೆಯಾಗಲೇ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

19 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

24 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago