ಗಂಡು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒತ್ತಾಯ: ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಮನವಿ

ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ ವರ್ಷ ಗಂಡು ನಾಯಿಗಳಿಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕೆಂದು ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಕಾರ್ತಿಕೇಶ್ವರ್ ನಿಮ್ಮ ಸಲಹೆ ಸ್ವೀಕರಿಸಿ ಗಂಡುನಾಯಿಗಳಿಗೂ ಆಪರೇಷನ್ ಮಾಡಲಾಗುವುದು ಎಂದರು.

ನಗರಸಭೆ ವತಿಯಿಂದ 2026-27ನೇ ಸಾಲಿನ ಆಯ-ವ್ಯಯ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ನಗರದ ಡಾ.ರಾಜ್ ಕುಮಾರ್ ಕಲಾ‌ ಮಂದಿರದಲ್ಲಿ ಬುಧವಾರ ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ್, ಮಹಿಳೆಯರಿಗೆ ಅವಕಾಶ ಸಿಗುವುದೇ ಕಡಿಮೆ, ನಗರಸಭೆಯಲ್ಲಿ ಈ ಬಾರಿ ಮಹಿಳೆಯರೆ ಅಧ್ಯಕ್ಷರಾಗಿದ್ದಾರೆ. ಮಹಿಳೆಯರಿಗೆ ಮುಂದೆ ಅವಕಾಶ ಸಿಗುವುದು ಇಲ್ಲವೋ ಹೀಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ಹೊಸ ಮುನ್ನುಡಿಗೆ ನಾಂದಿಹಾಡಿ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನ ರೂಪಿಸುವಂತೆ ಒತ್ತಾಯಿಸಿದರು.

ಡಾ. ಶಿವರಾಜುಕುಮಾರ್ ಸಂಘದ ಮುಖಂಡ ರಮೇಶ್ ಮಾತನಾಡಿ, ದಿ.ಜಾಲಪ್ಪ ಕಾಲದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಿದ್ದು ಬಿಟ್ಟರೆ ಈವರೆಗೆ ಏನೇನೂ ಅಭಿವೃದ್ಧಿಯಾಗಿಲ್ಲ. ಹಳೆ ಮಾರುಕಟ್ಟೆಯನ್ನು ಧ್ವಂಸ ಮಾಡಿ 15 ವರ್ಷ ಕಳೆಯಿತು. ಈವರೆಗೆ ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಿಲ್ಲ. ಜನಪರವಾದ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಕರ್ತ ಶ್ರೀಕಾಂತ್ ಮಾತನಾಡಿ, ಕಳೆದ ಐದು ವರ್ಷಗಳಿಂದಲೂ ಬಜೆಟ್ ನಲ್ಲಿ ದೊಡ್ಡಬಳ್ಳಾಪುರ ಹಬ್ಬ, ಸಾಂಸ್ಕ್ರತಿಕ ಹಬ್ಬ, ನಗರಸಭೆ ಶತಮಾನೋತ್ಸವ, ನಗರದ ಜೂನಿಯರ್ ಕಾಲೇಜು ಶತಮಾನೋತ್ಸವ ಹಬ್ಬ ಮಾಡುತ್ತೇವೆ ಎಂದು ಹೇಳಲಾಗುತ್ತಿದೆ. ಈವರೆಗೆ ಮಾಡಲೇ ಇಲ್ಲ. ನಗರಸಭೆ ಮುಂಭಾಗ ಕೊಂಗಾಡಿಯಪ್ಪರ ಪ್ರತಿಮೆ ನಿರ್ಮಾಣ ಯೋಜನೆ ನೆನೆಗುದಿಗೆ ಬಿದ್ದಿದ್ದು ಶೀಘ್ರವಾಗಿ ಮುಗಿಸಬೇಕು ಎಂದರು.

ಉಳಿದಂತೆ ನಗರಸಭೆಗೆ ಆದಾಯದ ಮೂಲಗಳು ಬೇಕಾದಷ್ಟು ಇದೆ, ಅದನ್ನು ಹೇಗೆ ಪಡೆದುಕೊಳ್ಳುವುದು ಗೊತ್ತಿಲ್ಲ. ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಕಿರಿದಾದ ರಸ್ತೆಗಳ ಅಗಲೀಕರಣ ಸೇರಿದಂತೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಆಗ್ರಹಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಕೆ, ಉಪಾಧ್ಯಕ್ಷ ಮಲ್ಲೇಶ್, ಪೌರಾಯುಕ್ತ ಕಾರ್ತಿಕೇಶ್ವರ್, ಸದಸ್ಯರಾದ ತ.ನ ಪ್ರಭುದೇವ, ರವಿಕುಮಾರ್, ಶಿವು, ನವೀನ್, ಸುಧಾರಾಣಿ ಲಕ್ಷ್ಮಿನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಂಬಾಕು ಮುಕ್ತ ಯುವ ಅಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ…

12 hours ago

ಸ್ಕೂಲ್ ಬಸ್ ಹಾಗೂ ಬೈಕ್ ಅಪಘಾತ: ಇಬ್ಬರು ಮಕ್ಕಳು ಸಾ*ವು

ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2)…

13 hours ago

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು…

16 hours ago

ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ…!:ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ…

18 hours ago

ನಮ್ಮ ಮೆಟ್ರೋ ಟಿಕೆಟ್ ದರ ನಿಗದಿ ಮತ್ತು ದರ ಹೆಚ್ಚಳಕ್ಕೆ ಯಾರು ಜವಾಬ್ದಾರರು?

ಮೆಟ್ರೋ ಬೆಲೆ ಏರಿಕೆ.... " ನಾನು ಮೂರ್ಖ ಅಲ್ಲ " ಎರಡೂ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,…

23 hours ago

ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ…

23 hours ago