ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ ವರ್ಷ ಗಂಡು ನಾಯಿಗಳಿಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕೆಂದು ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಕಾರ್ತಿಕೇಶ್ವರ್ ನಿಮ್ಮ ಸಲಹೆ ಸ್ವೀಕರಿಸಿ ಗಂಡುನಾಯಿಗಳಿಗೂ ಆಪರೇಷನ್ ಮಾಡಲಾಗುವುದು ಎಂದರು.
ನಗರಸಭೆ ವತಿಯಿಂದ 2026-27ನೇ ಸಾಲಿನ ಆಯ-ವ್ಯಯ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ಬುಧವಾರ ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ್, ಮಹಿಳೆಯರಿಗೆ ಅವಕಾಶ ಸಿಗುವುದೇ ಕಡಿಮೆ, ನಗರಸಭೆಯಲ್ಲಿ ಈ ಬಾರಿ ಮಹಿಳೆಯರೆ ಅಧ್ಯಕ್ಷರಾಗಿದ್ದಾರೆ. ಮಹಿಳೆಯರಿಗೆ ಮುಂದೆ ಅವಕಾಶ ಸಿಗುವುದು ಇಲ್ಲವೋ ಹೀಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ಹೊಸ ಮುನ್ನುಡಿಗೆ ನಾಂದಿಹಾಡಿ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನ ರೂಪಿಸುವಂತೆ ಒತ್ತಾಯಿಸಿದರು.
ಡಾ. ಶಿವರಾಜುಕುಮಾರ್ ಸಂಘದ ಮುಖಂಡ ರಮೇಶ್ ಮಾತನಾಡಿ, ದಿ.ಜಾಲಪ್ಪ ಕಾಲದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಿದ್ದು ಬಿಟ್ಟರೆ ಈವರೆಗೆ ಏನೇನೂ ಅಭಿವೃದ್ಧಿಯಾಗಿಲ್ಲ. ಹಳೆ ಮಾರುಕಟ್ಟೆಯನ್ನು ಧ್ವಂಸ ಮಾಡಿ 15 ವರ್ಷ ಕಳೆಯಿತು. ಈವರೆಗೆ ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಿಲ್ಲ. ಜನಪರವಾದ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪತ್ರಕರ್ತ ಶ್ರೀಕಾಂತ್ ಮಾತನಾಡಿ, ಕಳೆದ ಐದು ವರ್ಷಗಳಿಂದಲೂ ಬಜೆಟ್ ನಲ್ಲಿ ದೊಡ್ಡಬಳ್ಳಾಪುರ ಹಬ್ಬ, ಸಾಂಸ್ಕ್ರತಿಕ ಹಬ್ಬ, ನಗರಸಭೆ ಶತಮಾನೋತ್ಸವ, ನಗರದ ಜೂನಿಯರ್ ಕಾಲೇಜು ಶತಮಾನೋತ್ಸವ ಹಬ್ಬ ಮಾಡುತ್ತೇವೆ ಎಂದು ಹೇಳಲಾಗುತ್ತಿದೆ. ಈವರೆಗೆ ಮಾಡಲೇ ಇಲ್ಲ. ನಗರಸಭೆ ಮುಂಭಾಗ ಕೊಂಗಾಡಿಯಪ್ಪರ ಪ್ರತಿಮೆ ನಿರ್ಮಾಣ ಯೋಜನೆ ನೆನೆಗುದಿಗೆ ಬಿದ್ದಿದ್ದು ಶೀಘ್ರವಾಗಿ ಮುಗಿಸಬೇಕು ಎಂದರು.
ಉಳಿದಂತೆ ನಗರಸಭೆಗೆ ಆದಾಯದ ಮೂಲಗಳು ಬೇಕಾದಷ್ಟು ಇದೆ, ಅದನ್ನು ಹೇಗೆ ಪಡೆದುಕೊಳ್ಳುವುದು ಗೊತ್ತಿಲ್ಲ. ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಕಿರಿದಾದ ರಸ್ತೆಗಳ ಅಗಲೀಕರಣ ಸೇರಿದಂತೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಆಗ್ರಹಿಸಿದರು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಕೆ, ಉಪಾಧ್ಯಕ್ಷ ಮಲ್ಲೇಶ್, ಪೌರಾಯುಕ್ತ ಕಾರ್ತಿಕೇಶ್ವರ್, ಸದಸ್ಯರಾದ ತ.ನ ಪ್ರಭುದೇವ, ರವಿಕುಮಾರ್, ಶಿವು, ನವೀನ್, ಸುಧಾರಾಣಿ ಲಕ್ಷ್ಮಿನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…