ಗಂಡು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒತ್ತಾಯ: ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಮನವಿ

ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ ವರ್ಷ ಗಂಡು ನಾಯಿಗಳಿಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕೆಂದು ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಕಾರ್ತಿಕೇಶ್ವರ್ ನಿಮ್ಮ ಸಲಹೆ ಸ್ವೀಕರಿಸಿ ಗಂಡುನಾಯಿಗಳಿಗೂ ಆಪರೇಷನ್ ಮಾಡಲಾಗುವುದು ಎಂದರು.

ನಗರಸಭೆ ವತಿಯಿಂದ 2026-27ನೇ ಸಾಲಿನ ಆಯ-ವ್ಯಯ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ನಗರದ ಡಾ.ರಾಜ್ ಕುಮಾರ್ ಕಲಾ‌ ಮಂದಿರದಲ್ಲಿ ಬುಧವಾರ ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ನಗರಸಭಾ ಮಾಜಿ ಸದಸ್ಯೆ ಪ್ರಮೀಳಾ ಮಹದೇವ್, ಮಹಿಳೆಯರಿಗೆ ಅವಕಾಶ ಸಿಗುವುದೇ ಕಡಿಮೆ, ನಗರಸಭೆಯಲ್ಲಿ ಈ ಬಾರಿ ಮಹಿಳೆಯರೆ ಅಧ್ಯಕ್ಷರಾಗಿದ್ದಾರೆ. ಮಹಿಳೆಯರಿಗೆ ಮುಂದೆ ಅವಕಾಶ ಸಿಗುವುದು ಇಲ್ಲವೋ ಹೀಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ಹೊಸ ಮುನ್ನುಡಿಗೆ ನಾಂದಿಹಾಡಿ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನ ರೂಪಿಸುವಂತೆ ಒತ್ತಾಯಿಸಿದರು.

ಡಾ. ಶಿವರಾಜುಕುಮಾರ್ ಸಂಘದ ಮುಖಂಡ ರಮೇಶ್ ಮಾತನಾಡಿ, ದಿ.ಜಾಲಪ್ಪ ಕಾಲದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಿದ್ದು ಬಿಟ್ಟರೆ ಈವರೆಗೆ ಏನೇನೂ ಅಭಿವೃದ್ಧಿಯಾಗಿಲ್ಲ. ಹಳೆ ಮಾರುಕಟ್ಟೆಯನ್ನು ಧ್ವಂಸ ಮಾಡಿ 15 ವರ್ಷ ಕಳೆಯಿತು. ಈವರೆಗೆ ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಿಲ್ಲ. ಜನಪರವಾದ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಕರ್ತ ಶ್ರೀಕಾಂತ್ ಮಾತನಾಡಿ, ಕಳೆದ ಐದು ವರ್ಷಗಳಿಂದಲೂ ಬಜೆಟ್ ನಲ್ಲಿ ದೊಡ್ಡಬಳ್ಳಾಪುರ ಹಬ್ಬ, ಸಾಂಸ್ಕ್ರತಿಕ ಹಬ್ಬ, ನಗರಸಭೆ ಶತಮಾನೋತ್ಸವ, ನಗರದ ಜೂನಿಯರ್ ಕಾಲೇಜು ಶತಮಾನೋತ್ಸವ ಹಬ್ಬ ಮಾಡುತ್ತೇವೆ ಎಂದು ಹೇಳಲಾಗುತ್ತಿದೆ. ಈವರೆಗೆ ಮಾಡಲೇ ಇಲ್ಲ. ನಗರಸಭೆ ಮುಂಭಾಗ ಕೊಂಗಾಡಿಯಪ್ಪರ ಪ್ರತಿಮೆ ನಿರ್ಮಾಣ ಯೋಜನೆ ನೆನೆಗುದಿಗೆ ಬಿದ್ದಿದ್ದು ಶೀಘ್ರವಾಗಿ ಮುಗಿಸಬೇಕು ಎಂದರು.

ಉಳಿದಂತೆ ನಗರಸಭೆಗೆ ಆದಾಯದ ಮೂಲಗಳು ಬೇಕಾದಷ್ಟು ಇದೆ, ಅದನ್ನು ಹೇಗೆ ಪಡೆದುಕೊಳ್ಳುವುದು ಗೊತ್ತಿಲ್ಲ. ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಕಿರಿದಾದ ರಸ್ತೆಗಳ ಅಗಲೀಕರಣ ಸೇರಿದಂತೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಆಗ್ರಹಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಕೆ, ಉಪಾಧ್ಯಕ್ಷ ಮಲ್ಲೇಶ್, ಪೌರಾಯುಕ್ತ ಕಾರ್ತಿಕೇಶ್ವರ್, ಸದಸ್ಯರಾದ ತ.ನ ಪ್ರಭುದೇವ, ರವಿಕುಮಾರ್, ಶಿವು, ನವೀನ್, ಸುಧಾರಾಣಿ ಲಕ್ಷ್ಮಿನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

39 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago