ಗಂಡ್ರಗೊಳಿಪುರ ವಿಎಸ್ಎಸ್ಎನ್‌ ಚುನಾವಣೆ ಕಾನೂನು‌‌ ಬಾಹಿರ-ಸಹಕಾರಿ ಸಂಘದ ಪ್ರವರ್ತಕರನ್ನೇ ಕೈಬಿಟ್ಟು ಪಹಣಿ ಹೊಂದಿಲ್ಲದವರನ್ನ ಮತದಾರರ ಪಟ್ಟಿಗೆ ಸೇರ್ಪಡೆ- ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಿ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಗ್ರಹ

ತಾಲೂಕಿನ ದೊಡ್ಡಬೆಳವಂಗಲ‌ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಪ್ರವರ್ತಕರ ಗಮನಕ್ಕೆ ಹಾಗೂ ಸದಸ್ಯರ ಗಮನಕ್ಕೆ ತರದೇ ಏಕಾಏಕಿ ಚುನಾವಣೆ ನಡೆಸಲು ಮುಂದಾಗಿದ್ದಾರೆ. ಚುನಾವಣಾಧಿಕಾರಿಗಳು ಆಡಳಿತ ಪಕ್ಷದ ಸದಸ್ಯರ ಒತ್ತಡಕ್ಕೆ ಒಳಗಾಗಿ ವಿರೋಧಪಕ್ಷದವರನ್ನು ಹೊರಗಿಟ್ಟು ಕಾನೂನು ನಿಯಮಗಳನ್ನ ಮೀರಿ ಚುನಾವಣೆಗೆ ಸಹಕಾರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.

ನಂತರ ಗಂಡ್ರಗೊಳಿಪುರದ ವಿಎಸ್ಎಸ್ಎನ್ ಮುಖ್ಯ ಪ್ರವರ್ತಕ ಗಂಗಾಧರಯ್ಯ ಮಾತನಾಡಿ, ಚುನಾವಣೆ ಘೋಷಣೆ ಬಗ್ಗೆ ಮುಖ್ಯ ಪ್ರವರ್ತಕನಾದ ನನ್ನ ಗಮನಕ್ಕೂ ಬಂದಿಲ್ಲ. ಜೊತೆಗೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದವರ ಗಮನಕ್ಕೆ ತರದೇ ಏಕಾಏಕಿ ಚುನಾವಣೆ ಘೋಷಣೆ ಮಾಡಲಾಗಿದೆ. ಆಶ್ಚರ್ಯವೆಂದರೆ ನನ್ನ ಹೆಸರನ್ನು ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.

ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್  ಷೇರುದಾರರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago