ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.
ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.
ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್ ಷೇರುದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…