ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.
ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.
ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್ ಷೇರುದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…