ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.
ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.
ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್ ಷೇರುದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…