ಗಂಡ್ರಗೊಳಿಪುರ ವಿಎಸ್ಎಸ್ಎನ್‌ ಚುನಾವಣೆ ಕಾನೂನು‌‌ ಬಾಹಿರ-ಸಹಕಾರಿ ಸಂಘದ ಪ್ರವರ್ತಕರನ್ನೇ ಕೈಬಿಟ್ಟು ಪಹಣಿ ಹೊಂದಿಲ್ಲದವರನ್ನ ಮತದಾರರ ಪಟ್ಟಿಗೆ ಸೇರ್ಪಡೆ- ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಿ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಗ್ರಹ

ತಾಲೂಕಿನ ದೊಡ್ಡಬೆಳವಂಗಲ‌ ಹೋಬಳಿಯ ಗಂಡ್ರಗೊಳಿಪುರ ವ್ಯವಸಾಯ ಸೇವಾ ಸಹಕಾರ ಸಂಘ(ವಿ ಎಸ್ಎಸ್ ಎನ್) ಚುನಾವಣೆ ಪ್ರಕ್ರಿಯೆ ಕಾನೂನು ಬದ್ಧವಾಗಿಲ್ಲ, ಮತದಾರ ಪಟ್ಟಿಯಲ್ಲಿ ಪಹಣಿ ಹೊಂದಿಲ್ಲದ ಹಲವಾರು ಜನ ಸೇರ್ಪಡೆಯಾಗಿದ್ದಾರೆ. ಅರ್ಹ ಷೇರುದಾರರನ್ನು ಪಟ್ಟಿಯಿಂದ ಹೊರಗಿಟ್ಟು ಚುನಾವಣೆ ನಡೆಸಲು ಹೊರಟಿರುವುದು ಸರಿಯಲ್ಲ. ಇದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ಈಗ ಘೋಷಣೆಯಾಗಿರುವ ಸೊಸೈಟಿ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಈ ಕುರಿತು ಗಂಡ್ರಗೊಳಿಪುರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನಸವಾಡಿ ಹಾಗೂ ಹೊನ್ನಾವರ ಪಂಚಾಯಿತಿ ವ್ಯಾಪ್ತಿಯ ಸುಮಾರು 800 ಷೇರುದಾರರು ಕನಸವಾಡಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಯಶಸ್ಸಿಗೆ ಕಾರಣರಾಗಿದ್ದರು. ಪ್ರಸ್ತುತ ಕನಸವಾಡಿಯಿಂದ ಬೇರ್ಪಟ್ಟು ಈಗ ಪ್ರತ್ಯೇಕವಾಗಿ ಗಂಡ್ರಗೊಳಿಪುರ ವಿಎಸ್ಎಸ್ಎನ್ ಅಸ್ತಿತ್ವಕ್ಕೆ ಬಂದಿದೆ. ಆದರೆ ಮೂಲ ಷೇರುದಾರರನ್ನು ಕೈಬಿಟ್ಟು ನಕಲಿ ಷೇರುದಾರರನ್ನ ಮತದಾರರ ಪಟ್ಟಿಗೆ ಸೇರಿಸಿ ಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಪ್ರವರ್ತಕರ ಗಮನಕ್ಕೆ ಹಾಗೂ ಸದಸ್ಯರ ಗಮನಕ್ಕೆ ತರದೇ ಏಕಾಏಕಿ ಚುನಾವಣೆ ನಡೆಸಲು ಮುಂದಾಗಿದ್ದಾರೆ. ಚುನಾವಣಾಧಿಕಾರಿಗಳು ಆಡಳಿತ ಪಕ್ಷದ ಸದಸ್ಯರ ಒತ್ತಡಕ್ಕೆ ಒಳಗಾಗಿ ವಿರೋಧಪಕ್ಷದವರನ್ನು ಹೊರಗಿಟ್ಟು ಕಾನೂನು ನಿಯಮಗಳನ್ನ ಮೀರಿ ಚುನಾವಣೆಗೆ ಸಹಕಾರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಚುನಾವಣೆಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಮತದಾರರ ಪಟ್ಟಿ ಸರಿಪಡಿಸಿ ನಂತರ ಚುನಾವಣೆ ನಡೆಸಲಿ. ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹರೀಶ್ ಗೌಡ ಹೇಳಿದರು.

ನಂತರ ಗಂಡ್ರಗೊಳಿಪುರದ ವಿಎಸ್ಎಸ್ಎನ್ ಮುಖ್ಯ ಪ್ರವರ್ತಕ ಗಂಗಾಧರಯ್ಯ ಮಾತನಾಡಿ, ಚುನಾವಣೆ ಘೋಷಣೆ ಬಗ್ಗೆ ಮುಖ್ಯ ಪ್ರವರ್ತಕನಾದ ನನ್ನ ಗಮನಕ್ಕೂ ಬಂದಿಲ್ಲ. ಜೊತೆಗೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದವರ ಗಮನಕ್ಕೆ ತರದೇ ಏಕಾಏಕಿ ಚುನಾವಣೆ ಘೋಷಣೆ ಮಾಡಲಾಗಿದೆ. ಆಶ್ಚರ್ಯವೆಂದರೆ ನನ್ನ ಹೆಸರನ್ನು ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಮತದಾರ ಪಟ್ಟಿ ಸರಿಪಡಿಸಿ ಚುನಾವಣೆ ನಡೆಸಲಿ. ಅಲ್ಲಿಯವರೆಗೆ ಚುನಾವಣೆ ಮುಂದೂಡಬೇಕು ಇಲ್ಲವಾದಲ್ಲಿ ಕಾನೂನು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.

ಈ ವೇಳೆ ವಿಎಸ್ಎಸ್ಎನ್ ಸದಸ್ಯ ಗಂಗಾಧರಯ್ಯ ಸೇರಿದಂತೆ ಗಂಡ್ರಗೊಳಿಪುರ ವಿಎಸ್ಎಸ್ಎನ್  ಷೇರುದಾರರು ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

22 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago