ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.
ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.
ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.
ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.
ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…