ಗಂಡ ಸತ್ತವರಿಗೆ ಹಣ ಕೊಡಿಸುವ ಆಮಿಷ: ವೃದ್ಧೆ ಬಳಿ ಚಿನ್ನದ ಸರ ಎಗರಿಸಿ ವಂಚಕ ಎಸ್ಕೇಪ್

ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.

ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ‌ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.

ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.

ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.

ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago