ಗಂಡ ಸತ್ತವರಿಗೆ ಹಣ ಕೊಡಿಸುವ ಆಮಿಷ: ವೃದ್ಧೆ ಬಳಿ ಚಿನ್ನದ ಸರ ಎಗರಿಸಿ ವಂಚಕ ಎಸ್ಕೇಪ್

ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.

ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ‌ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.

ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.

ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.

ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ramesh Babu

Journalist

Recent Posts

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

16 minutes ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

28 minutes ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

3 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

4 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

9 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

11 hours ago