ಗಂಡ ಸತ್ತವರಿಗೆ ಹಣ ಕೊಡಿಸುವ ಆಮಿಷ: ವೃದ್ಧೆ ಬಳಿ ಚಿನ್ನದ ಸರ ಎಗರಿಸಿ ವಂಚಕ ಎಸ್ಕೇಪ್

ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.

ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ‌ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.

ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.

ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.

ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

14 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago