ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.
ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.
ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.
ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.
ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…