ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.
ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.
ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.
ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.
ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…