ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.
ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.
ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.
ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.
ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…