ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.
ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.
ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.
ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.
ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…