ಗಂಡ ಸತ್ತವರಿಗೆ ಹಣ ಕೊಡಿಸುವ ಆಮಿಷ: ವೃದ್ಧೆ ಬಳಿ ಚಿನ್ನದ ಸರ ಎಗರಿಸಿ ವಂಚಕ ಎಸ್ಕೇಪ್

ಗಂಡ ಸತ್ತವರಿಗೆ ಹಣ ಕೊಡಿಸುವ ಸೋಗಿನಲ್ಲಿ ಬಂದ ವಂಚಕ ಸುಮಾರು 62 ವರ್ಷದ ಒಂಟಿ ವೃದ್ಧೆಯನ್ನು ಬಲೆಗೆ ಬೀಳಿಸಿ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ವಿವೇಕಾನಂದ ನಗರದಲ್ಲಿ ಘಟನೆ ನಡೆದಿದೆ. ವೃದ್ಧೆ ಸುಬ್ಬಲಕ್ಷಮ್ಮ ವಂಚಕನ ಮೋಸದ ಜಾಲಕ್ಕೆ ಸಿಲುಕಿ 20 ಗ್ರಾಂ. ತೂಕದ ಚಿನ್ನದ ಸರವನ್ನ ಕಳೆದುಕೊಂಡಿದ್ದಾರೆ, ಜೀವನದ ಕಷ್ಟಕಾಲದಲ್ಲಿ ಗಂಡನ ದುಡಿಮೆ ಹಣದಿಂದ ಸಂಪಾದಿಸಿದ ಚಿನ್ನದ ಸರವನ್ನ ಕಳೆದುಕೊಂಡಿದ್ದಕ್ಕೆ ಕಣ್ಣಿರೀಟ್ಟಿದ್ದಾರೆ.

ಸುಬ್ಬಲಕ್ಷಮ್ಮ ತನ್ನ ಗಂಡನನ್ನು ವರ್ಷದ ಹಿಂದೆ ಕಳೆದುಕೊಂಡು ವಿವೇಕಾನಂದ ನಗರದಲ್ಲಿ ಒಂಟಿ ಜೀವನ‌ ನಡೆಸುತ್ತಿದ್ದರು. ಮೇ.11 ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಮನೆ ಸಮೀಪದ ಅಂಜನೇಯ ದೇವಸ್ಥಾನ ಬಳಿ ಒಂಟಿಯಾಗಿ ಕುಳಿತಿದ್ದರು. ಇದನ್ನು ಗಮನಿಸಿ ಸುಮಾರು 35 ವರ್ಷದ ವ್ಯಕ್ತಿಯೋರ್ವನು ಮೋಟಾರ್ ಸೈಕಲ್ ನಲ್ಲಿ ದೇವಸ್ಥಾನ ಬಳಿ ಬಂದು ದೇವರಿಗೆ ನಮಸ್ಕರಿಸಿ, ಅಜ್ಜಿಯ ಬಳಿ ನಯವಾದ ಮತಗಳನ್ನಾಡಿ, ಗಂಡ ಸತ್ತವರಿಗೆ, ಕಣ್ಣು ಕಾಣದವರಿಗೆ ತಾಲೂಕು ಕಚೇರಿಯಲ್ಲಿ 10 ಸಾವಿರ ಹಣ ಕೊಡುತ್ತಿದ್ದಾರೆಂದು ಹೇಳಿದ್ದಾನೆ.

ವಂಚಕನ ಮಾತಿಗೆ ಮರುಳಾದ ಆಕೆ ಆತನನ್ನು ಸಂಪೂರ್ಣ ನಂಬಿ, ವಂಚಕ ಹೇಳಿದ ಹಾಗೆ ಮಾಡಿದ್ದಾರೆ. ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ನಗರವನ್ನೆಲ್ಲಾ ಸುತ್ತಿಸಿ ಕೊನೆಗೆ ನಗರದ ಸೌಂದರ್ಯ ಮಹಲ್ ಬಳಿ ನಿಲ್ಲಿಸಿ, ಚಿನ್ನದ ಒಡವೆ ಇದ್ದರೆ ಅಧಿಕಾರಿಗಳು ಹಣ ಕೊಡುವುದಿಲ್ಲ ಎಂದು ಹೇಳಿದ ಆತ ಚಿನ್ನದ ಸರ ಮತ್ತು ಮೊಬೈಲ್ ಅನ್ನು ಸ್ಕೂಟರ್ ನ ಡಿಕ್ಕಿಯಲ್ಲಿ ಹಾಕಿಸಿದ್ದಾನೆ.

ಅಲ್ಲಿಂದ ಸೌಂದರ್ಯಮಹಲ್ ಬಳಿಯ ಕೃಷ್ಣಪ್ಪ ಕ್ಲಿನಿಕ್ ಬಳಿ ವೃದ್ದೆಯನ್ನ ಕರೆದುಕೊಂಡ ಹೋಗಿದ್ದಾನೆ, ವೃದ್ದೆಯ ಕೈಗೆ 200 ರೂಪಾಯಿ ಕೊಟ್ಟ ವಂಚಕ ಜೆರಾಕ್ಸ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ.

ವಂಚಕ ಬರುವುದನ್ನೇ ಕಾಯುತ್ತಿದ್ದ ವೃದ್ಧೆ ಆತ ಬಾರದೆ ಹೋದಾಗ ಗಲಿಬಿಲಿಗೊಂಡು ಕಣ್ಣೀರಿಟ್ಟು ಅಲ್ಲಿಂದ ನಡೆದುಕೊಂಡು ತಮ್ಮನ ಮಗನ ಮನೆಗೆ ಬಂದು ನಡೆದ ಮೋಸದ ಜಾಲದ ಬಗ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago