ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಇವರಿಬ್ಬರ ಜಗಳದಲ್ಲಿ ಏನೂ ತಿಳಿಯದ ಪುಟ್ಟ ಕಂದಮ್ಮನನ್ನು ಪಾಪಿ ತಾಯಿ ಸಾಯಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಜಯರಾಮ್(34), ಮಹಾಲಕ್ಷ್ಮಿ (28) ಜಗಳ ಮಾಡಿಕೊಂಡ ದಂಪತಿ.
ಸಿರಿ(5) ಕೊಲೆಯಾದ ಮಗು.
ಜಯರಾಂ ಹಾಗೂ ಮಹಾಲಕ್ಷ್ಮಿ ಪ್ರೀತಿಸಿಕೊಂಡು 8 ವರ್ಷದ ಹಿಂದೆ ಮದುವೆಯಾಗಿದ್ದರು.
ಈ ಜಯರಾಮ್ ಎರಡು ವರ್ಷದಿಂದ ಕೆಲಸವಿಲ್ಲದೆ ಕುಡಿತಕ್ಕೆ ದಾಸನಾಗಿದ್ದ. ಕೆಲಸಕ್ಕೆ ಹೋಗದೆ ಮನೆಯಲ್ಲಿ ಇದ್ದನಂತೆ.
ಈ ಕುರಿತು ಮನೆಯಲ್ಲಿ ಆಗಾಗ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಕೂಡ ಇಬ್ಬರ ನಡುವೆ ಜಗಳ ತಾರಕಕ್ಕೇರಿದ್ದು, ರೂಂ ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಮಹಾಲಕ್ಷ್ಮಿ, ರೂಮಿನಲ್ಲಿದ್ದ ಮಗುವಿನ ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ.
ಕೂಡಲೇ ಮನೆಯವರು ಡೋರ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರಿಂದ ತಾಯಿ ಮಹಾಲಕ್ಷ್ಮಿಯನ್ನು ರಕ್ಷಣೆ ಮಾಡಿದ್ದಾರೆ.
ಮಹಾಲಕ್ಷ್ಮಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್ ಪಿ ಡಾ.ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಪತಿ ಜಯರಾಮ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…