ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಗಂಡ ಹೆಂಡತಿ ನಡುವೆ ಕಿರಿಕ್ ಆಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದ ಬಳಿ ಕೊಲೆ ನಡೆದಿದೆ.
ಜೂ. 3ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 41 ವರ್ಷದ ಸುಜಾತ ಎಂಬ ಮಹಿಳೆಗೆ ಗಂಗಿರೆಡ್ಡಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸುಜಾತ ಮತ್ತು ಗಂಗಿರೆಡ್ಡಿ ಸೋಂಪುರದಲ್ಲಿ ಬಾಡಿಗೆ ಮನೆಗಳನ್ನ ಹೊಂದಿದ್ದರು. ಗಂಗಿರೆಡ್ಡಿ ಬಾಡಿಗೆ ಹಣದಲ್ಲಿ ಕುಡಿದು ಮಜಾ ಮಾಡುತ್ತಿದ್ದ. ಈ ಹಿನ್ನೆಲೆ ಸುಜಾತ ಇತ್ತೀಚೆಗೆ ಮನೆ ಬಾಡಿಗೆ ಹಣವನ್ನ ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದರು.
ತರಕಾರಿ ಅಂಗಡಿ ನಡೆಸುತ್ತಿದ್ದ ಸುಜಾತ ಶೀಲದ ಮೇಲೆಯೂ ಗಂಗಿರೆಡ್ಡಿ ಶಂಕೆ ವ್ಯಕ್ತಪಡಿಸುತ್ತಿದ್ದ. ಈ ಎರಡು ವಿಚಾರಕ್ಕೆ ಇಬ್ಬರ ನಡುವೆ ನಿತ್ಯ ಪದೇ ಪದೇ ಗಲಾಟೆಯಾಗುತ್ತಿತ್ತು.
ಕಳೆದ ಮೂರನೇ ತಾರೀಖಿನಂದು ಸಹ ಇಬ್ಬರ ನಡುವೆ ಗಲಾಟೆ ನಡೆದು ತಾರಕಕ್ಕೆ ಏರೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…